
ಕೊಲಂಬೊ(ಆ.08): 0-2 ಅಂತರದಲ್ಲಿ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಈಗಾಗಲೇ ಭಾರತಕ್ಕೆ ಬಿಟ್ಟುಕೊಟ್ಟಿರುವ ಶ್ರೀಲಂಕಾಗೆ 3ನೇ ಟೆಸ್ಟ್ಗೂ ಮುನ್ನ ಮತ್ತೊಂದು ಆಘಾತ ಎದುರಾಗಿದೆ. ಪ್ರಮುಖ ಸ್ಪಿನ್ನರ್ ರಂಗನಾ ಹೆರಾತ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಪಲ್ಲೆಕಲ್ಲೆಯಲ್ಲಿ ಆ.12ರಿಂದ ಆರಂಭಗೊಳ್ಳಲಿರುವ 3ನೇ ಟೆಸ್ಟ್ನಿಂದ ಹೊರಬೀಳುವುದು ಬಹುತೇಕ ಖಚಿತವಾಗಿದೆ.
ಚಾಂಡಿಮಲ್ ಅನುಪಸ್ಥಿತಿಯಲ್ಲಿ ಹೆರಾತ್ ಮೊದಲ ಟೆಸ್ಟ್ನಲ್ಲಿ ತಂಡವನ್ನು ಮುನ್ನಡೆಸಿದ್ದರು. ಸರಣಿಯಲ್ಲಿ ಹೆರಾತ್ 91 ಓವರ್ ಬೌಲ್ ಮಾಡಿದ್ದಾರೆ. ಈಗಾಗಲೇ ತಂಡದಿಂದ ಆಲ್ರೌಂಡರ್ ಅಸೆಲಾ ಗುಣರತ್ನೆ ಹಾಗೂ ವೇಗಿ ನುವಾನ್ ಪ್ರದೀಪ್ ಹೊರಬಿದ್ದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.