
ಕೊಲಂಬೊ(ಜು.21): ಭಾರತದ ವಿರುದ್ಧ ಇದೇ ತಿಂಗಳು ಕೊನೆಯಲ್ಲಿ ಆರಂಭವಾಗಲಿರುವ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಶ್ರೀಲಂಕಾ ತಂಡವನ್ನು ಹಿರಿಯ ಎಡಗೈ ಸ್ಪಿನ್ನರ್ ರಂಗನಾ ಹೆರಾತ್ ಮುನ್ನಡೆಸಲಿದ್ದಾರೆ.
ಶ್ರೀಲಂಕಾ ಟೆಸ್ಟ್ ತಂಡದ ನೂತನ ನಾಯಕ ದಿನೇಶ್ ಚಾಂಡಿಮಲ್ ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಚಾಂಡೀಮಲ್ ನ್ಯೂಮೋನಿಯಾದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಚಾಂಡೀಮಲ್ ಅನುಪಸ್ಥಿತಿಯಲ್ಲಿ ಶ್ರೀಲಂಕಾ ತಂಡವನ್ನು ರಂಗನಾ ಹೆರಾತ್ ಮುನ್ನಡೆಸಲಿದ್ದಾರೆ.
ಜಿಂಬಾಬ್ವೆ ವಿರುದ್ಧ 3-2 ರಿಂದ ಏಕದಿನ ಸರಣಿ ಸೋತ ಬಳಿಕ ಆ್ಯಂಜೆಲೋ ಮ್ಯಾಥ್ಯೂಸ್ ಬದಲು ಟೆಸ್ಟ್'ಗೆ ಚಾಂಡಿಮಲ್ ಮತ್ತು ಸಿಮಿತ ಓವರ್'ಗಳಿಗೆ ಉಪುಲ್ ತರಂಗ ಅವರನ್ನು ಶ್ರೀಲಂಕಾ ತಂಡದ ನಾಯಕರನ್ನಾಗಿ ನೇಮಿಸಲಾಗಿತ್ತು.
ಭಾರತ ತಂಡವು ಜುಲೈ 26ರಿಂದ ಗಾಲೆಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಆನಂತರ ಗಾಲೆ ಮತ್ತು ಪಲ್ಲೆಕೆಲೆಯಲ್ಲಿ ಮತ್ತೆರಡು ಟೆಸ್ಟ್ ಪಂದ್ಯವನ್ನಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.