ಇರಾನಿ ಕಪ್‌ ಪ್ರಶಸ್ತಿಗಾಗಿ ವಿದರ್ಭ-ಶೇಷ ಭಾರತ

Published : Feb 12, 2019, 09:45 AM IST
ಇರಾನಿ ಕಪ್‌ ಪ್ರಶಸ್ತಿಗಾಗಿ ವಿದರ್ಭ-ಶೇಷ ಭಾರತ

ಸಾರಾಂಶ

ಶೇಷ ಭಾರತ ತಂಡವನ್ನು ಭಾರತ ತಂಡದ ಉಪನಾಯಕ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್‌ ಅಗರ್‌ವಾಲ್‌, ವೇಗಿ ರೋನಿತ್‌ ಮೋರೆ ಹಾಗೂ ಆಲ್ರೌಂಡರ್‌ ಕೆ.ಗೌತಮ್‌ಗೆ ಸ್ಥಾನ ನೀಡಲಾಗಿದೆ. 

ನಾಗ್ಪುರ[ಫೆ.12]: ಸತತ 2ನೇ ಬಾರಿಗೆ ರಣಜಿ ಟ್ರೋಫಿ ಗೆದ್ದ ವಿದರ್ಭ, ಶೇಷ ಭಾರತ (ರೆಸ್ಟ್‌ ಆಫ್‌ ಇಂಡಿಯಾ) ವಿರುದ್ಧ ಇಲ್ಲಿ ಆರಂಭಗೊಂಡ ಇರಾನಿ ಟ್ರೋಫಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಟಾಸ್ ಗೆದ್ದ ಶೇಷ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ಕಳೆದ ವರ್ಷ ರಣಜಿ ಟ್ರೋಫಿ ಗೆಲುವಿನ ಬಳಿಕ ಇರಾನಿ ಟ್ರೋಫಿಯನ್ನೂ ಗೆದ್ದಿದ್ದ ವಿದರ್ಭ, ಪ್ರಶಸ್ತಿ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಸೌರಾಷ್ಟ್ರ ಮಣಿಸಿ ರಣಜಿ ಟ್ರೋಫಿ ಗೆದ್ದ ವಿದರ್ಭ!

ಶೇಷ ಭಾರತ ತಂಡವನ್ನು ಭಾರತ ತಂಡದ ಉಪನಾಯಕ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್‌ ಅಗರ್‌ವಾಲ್‌ ಹಾಗೂ ಆಲ್ರೌಂಡರ್‌ ಕೆ.ಗೌತಮ್‌ಗೆ ಸ್ಥಾನ ನೀಡಲಾಗಿದೆ. ಉಳಿದಂತೆ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಹನುಮ ವಿಹಾರಿ, ಮುಂಬೈ ಆಟಗಾರ ಶ್ರೇಯಸ್‌ ಅಯ್ಯರ್‌, ಜಾರ್ಖಂಡ್‌ ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ ಶೇಷ ಭಾರತದ ಬ್ಯಾಟಿಂಗ್‌ ಬಲ ಎನಿಸಿದ್ದಾರೆ. ಬ್ಯಾಟಿಂಗ್‌ಗೆ ಹೋಲಿಸಿದರೆ ಬೌಲಿಂಗ್‌ ವಿಭಾಗ ದುರ್ಬಲವಾಗಿದೆ. ಉತ್ತರ ಪ್ರದೇಶದ ಅಂಕಿತ್‌ ರಜಪೂತ್‌, ರಾಜಸ್ಥಾನದ ತನ್ವೀರ್‌ ಉಲ್‌ ಹಕ್‌, ಕೇರಳದ ಸಂದೀಪ್‌ ವಾರಿಯರ್‌, ಕರ್ನಾಟಕದ ರೋನಿತ್‌ ಮೋರೆ ತಂಡದಲ್ಲಿರುವ ವೇಗಿಗಳು. ಈ ನಾಲ್ವರಲ್ಲಿ ಮೂವರಿಗೆ ಸ್ಥಾನ ಸಿಗಲಿದೆ. ಗೌತಮ್‌ ಜತೆ ಸೌರಾಷ್ಟ್ರದ ಧರ್ಮೇಂದ್ರ ಜಡೇಜಾ ಸ್ಪಿನ್ನರ್‌ಗಳಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ.

ಮತ್ತೊಂದೆಡೆ ವಿದರ್ಭ ತನ್ನ ನಾಯಕ ಫೈಯಜ್‌ ಫಜಲ್‌, ರನ್‌ ಮಷಿನ್‌ ವಾಸೀಂ ಜಾಫರ್‌, ಗಣೇಶ್‌ ಸತೀಶ್‌, ಸಂಜಯ್‌ ರಾಮಸ್ವಾಮಿ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಿದೆ. ಮುಂಚೂಣಿ ವೇಗಿ ಉಮೇಶ್‌ ಯಾದವ್‌ ಸಣ್ಣ ಪ್ರಮಾಣದ ಗಾಯದಿಂದ ಬಳಲುತ್ತಿದ್ದು ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ರಜ್ನೀಶ್‌ ಗುರ್ಬಾನಿ ಬೌಲಿಂಗ್‌ ಪಡೆಯನ್ನು ಮುನ್ನಡೆಲಿದ್ದಾರೆ. ರಣಜಿ ಫೈನಲ್‌ನಲ್ಲಿ ಒಟ್ಟು 11 ವಿಕೆಟ್‌ ಕಿತ್ತ ಎಡಗೈ ಸ್ಪಿನ್ನರ್‌ ಆದಿತ್ಯ ಸರ್ವಾಟೆ ಮೇಲೆ ಎಲ್ಲರ ಕಣ್ಣಿದೆ.

ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ, ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?