ರಣಜಿ ಟ್ರೋಫಿ 2018: ರಾಜ್ಯಕ್ಕೆ ವಿನಯ್‌ ನಾಯಕ

Published : Nov 06, 2018, 09:15 AM IST
ರಣಜಿ ಟ್ರೋಫಿ 2018: ರಾಜ್ಯಕ್ಕೆ ವಿನಯ್‌ ನಾಯಕ

ಸಾರಾಂಶ

‘ಎ’ ಗುಂಪಿನಲ್ಲಿರುವ ಕರ್ನಾಟಕ, ನ.12ರಿಂದ ವಿದರ್ಭ ವಿರುದ್ಧ ನಾಗ್ಪುರದಲ್ಲಿ ನಡೆಯಲಿರುವ ಪಂದ್ಯದೊಂದಿಗೆ ಈ ಋುತುವಿನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಸೋಮವಾರ ಕೆಎಸ್‌ಸಿಎ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿತು. 

ಬೆಂಗಳೂರು(ನ.06): ವಿಜಯ್‌ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ಕಳಪೆ ಪ್ರದರ್ಶನ ನೀಡಿದ್ದಕ್ಕಾಗಿ ನಾಯಕತ್ವ ಕಳೆದುಕೊಂಡಿದ್ದ ವಿನಯ್‌ ಕುಮಾರ್‌ರನ್ನು, ರಣಜಿ ಟ್ರೋಫಿಯ ಮೊದಲ ಪಂದ್ಯಕ್ಕೆ ರಾಜ್ಯ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. 

‘ಎ’ ಗುಂಪಿನಲ್ಲಿರುವ ಕರ್ನಾಟಕ, ನ.12ರಿಂದ ವಿದರ್ಭ ವಿರುದ್ಧ ನಾಗ್ಪುರದಲ್ಲಿ ನಡೆಯಲಿರುವ ಪಂದ್ಯದೊಂದಿಗೆ ಈ ಋುತುವಿನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಸೋಮವಾರ ಕೆಎಸ್‌ಸಿಎ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿತು. 

ಭಾರತ ‘ಎ’ ತಂಡದಲ್ಲಿರುವ ಮಯಾಂಕ್‌ ಅಗರ್‌ವಾಲ್‌, ಕೆ.ಗೌತಮ್‌, ಭಾರತ ತಂಡದಲ್ಲಿರುವ ಮನೀಶ್‌ ಪಾಂಡೆ ಸೇವೆ ಅಲಭ್ಯವಾಗಲಿದೆ.

ತಂಡದ ವಿವರ: ವಿನಯ್‌ ಕುಮಾರ್‌ (ನಾಯಕ), ಕರುಣ್‌ ನಾಯರ್‌, ಆರ್‌.ಸಮರ್ಥ್, ಡಿ.ನಿಶ್ಚಲ್‌, ಪವನ್‌ ದೇಶಪಾಂಡೆ, ಸಿದ್ಧಾರ್ಥ್, ಕೆ.ವಿ, ಸ್ಟುವರ್ಟ್‌ ಬಿನ್ನಿ, ಶ್ರೇಯಸ್‌ ಗೋಪಾಲ್‌, ಅಭಿಮನ್ಯು ಮಿಥುನ್‌, ಪ್ರಸಿದ್ಧ್ ಕೃಷ್ಣ, ಜೆ. ಸುಚಿತ್‌, ರೋನಿತ್‌ ಮೋರೆ, ಶಿಶಿರ್‌ ಭವಾನೆ, ಶರತ್‌ ಬಿ.ಆರ್‌, ಶರತ್‌ ಶ್ರೀನಿವಾಸ್‌.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶೀ ಕ್ರಿಕೆಟ್‌ನ Uncapped ಜೋಡೆತ್ತು ಖರೀದಿಸಲು ದಾಖಲೆ ಮೊತ್ತ ಖರ್ಚು ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌!
ಕ್ಯಾಮರೋನ್ ಗ್ರೀನ್ ಬಳಿಕ ಮತ್ತೋರ್ವ ಕಾಸ್ಟ್ಲಿ ಆಟಗಾರನನ್ನು ಖರೀದಿಸಿದ ಕೋಲ್ಕತಾ! ಕೆಕೆಆರ್ ಈಗ ಮತ್ತಷ್ಟು ಬಲಿಷ್ಠ