ರಣಜಿ ಟ್ರೋಫಿ: ಕರ್ನಾಟಕಕ್ಕೆ ಸೌರಾಷ್ಟ್ರ ಶಾಕ್

Published : Dec 09, 2018, 01:27 PM IST
ರಣಜಿ ಟ್ರೋಫಿ: ಕರ್ನಾಟಕಕ್ಕೆ ಸೌರಾಷ್ಟ್ರ ಶಾಕ್

ಸಾರಾಂಶ

ಪಂದ್ಯದ ಮೂರನೇ ದಿನವಾದ ಶನಿವಾರ ಮೊದಲ ಇನ್ನಿಂಗ್ಸ್’ನಲ್ಲಿ 99 ರನ್’ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಸೌರಾಷ್ಟ್ರ, ರಾಜ್ಯದ ಬೌಲರ್’ಗಳ ಸಂಘಟಿತ ಪ್ರದರ್ಶನದ ಎದುರು 79 ರನ್’ಗಳಿಗೆ ನೆಲಕಚ್ಚಿತು. ಇದರೊಂದಿಗೆ ಸೌರಾಷ್ಟ್ರ ಕರ್ನಾಟಕಕ್ಕೆ 179 ರನ್’ಗಳ ಗೆಲುವಿನ ಗುರಿ ನಿಗಧಿ ಪಡಿಸಿತು.

ರಾಜ್’ಕೋಟ್[ಡಿ.09]: 2018-19ನೇ ಸಾಲಿನ ರಣಜಿ ಋತುವಿನಲ್ಲಿ ಕರ್ನಾಟಕ ಮೊದಲ ಸೋಲು ಅನುಭವಿಸಿದೆ. ಶನಿವಾರ ಇಲ್ಲಿ ಮುಕ್ತಾಯವಾದ ರಣಜಿ ’ಎ’ ಗುಂಪಿನ ಪಂದ್ಯದಲ್ಲಿ ಕರ್ನಾಟಕ, ಸೌರಾಷ್ಟ್ರ ಎದುರು 87 ರನ್’ಗಳ ಸೋಲು ಕಂಡಿತು.

ಪಂದ್ಯದ ಮೂರನೇ ದಿನವಾದ ಶನಿವಾರ ಮೊದಲ ಇನ್ನಿಂಗ್ಸ್’ನಲ್ಲಿ 99 ರನ್’ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಸೌರಾಷ್ಟ್ರ, ರಾಜ್ಯದ ಬೌಲರ್’ಗಳ ಸಂಘಟಿತ ಪ್ರದರ್ಶನದ ಎದುರು 79 ರನ್’ಗಳಿಗೆ ನೆಲಕಚ್ಚಿತು. ಇದರೊಂದಿಗೆ ಸೌರಾಷ್ಟ್ರ ಕರ್ನಾಟಕಕ್ಕೆ 179 ರನ್’ಗಳ ಗೆಲುವಿನ ಗುರಿ ನಿಗಧಿ ಪಡಿಸಿತು.

ಕಠಿಣ ಸವಾಲು ಬೆನ್ನತ್ತಿದ ಕರ್ನಾಟಕ ಮೊದಲ ಎಸೆತದಲ್ಲೇ ಸಮರ್ಥ್ ವಿಕೆಟ್ ಕಳೆದುಕೊಂಡಿತು. ತಂಡದ ಮೊತ್ತ 5 ರನ್’ಗಳಾಗುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ರಾಜ್ಯ ತಂಡ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ನಾಲ್ಕನೇ ವಿಕೆಟ್’ಗೆ ಜತೆಯಾದ ಶ್ರೇಯಸ್ ಗೋಪಾಲ್[27] ಹಾಗೂ ಕರುಣ್ ನಾಯರ್[30] ಜೋಡಿ 60 ರನ್ ಕಲೆಹಾಕುವ ಮೂಲಕ ತಂಡಕ್ಕೆ ಆಸರೆಯಾಯಿತು. ಈ ಇಬ್ಬರ ವಿಕೆಟ್ ಪತನವಾಗುತ್ತಿದ್ದಂತೆ ನಾಟಕೀಯ ಕುಸಿತ ಕಂಡ ಕರ್ನಾಟಕ ಕೇವಲ 7 ರನ್’ಗಳಿಸುವಷ್ಟರಲ್ಲಿ ಕೊನೆಯ 5 ವಿಕೆಟ್ ಕಳೆದುಕೊಂಡಿತು. 

ಒಂದೇ ದಿನವೇ 40 ವಿಕೆಟ್’ಗಳು ಉರುಳಿದವು. ಇದರಲ್ಲಿ 38 ವಿಕೆಟ್’ಗಳನ್ನು ಸ್ಪಿನ್ನರ್’ಗಳೇ ಪಡೆದದ್ದು ವಿಶೇಷ. ಈ ಗೆಲುವಿನೊಂದಿಗೆ ಸೌರಾಷ್ಟ್ರ ’ಎ’ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದರೆ, ಕರ್ನಾಟಕ 5ನೇ ಸ್ಥಾನಕ್ಕೆ ಕುಸಿದಿದೆ.

ಸಂಕ್ಷಿಪ್ತ ಸ್ಕೋರ್:
ಸೌರಾಷ್ಟ್ರ: 316 & 79
ಕರ್ನಾಟಕ: 217 &91
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ