
ಕೋಲ್ಕತ್ತಾ(ಅ.22): ಕೋಲ್ಕತ್ತಾದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಕರ್ನಾಟಕ ತಂಡ ಇನ್ನಿಂಗ್ಸ್ ಹಾಗೂ 160 ರನ್ಗಳ ಜಯ ದಾಖಲಿಸಿದೆ.
ಎರಡುವರೆ ದಿನದಲ್ಲೇ ಕನ್ನಡಿಗರು ಭರ್ಜರಿ ಪ್ರದರ್ಶನ ನೀಡಿ ಪಂದ್ಯ ಗೆದ್ದರು. ಈ ಮೂಲಕ ಕರ್ನಾಟಕಕ್ಕೆ 7 ಅಂಕಗಳು ಲಭಿಸಿವೆ.
ಮೊದಲ ಇನ್ನಿಂಗ್ಸ್ನಲ್ಲಿ ಡೆಲ್ಲಿಯನ್ನ 90 ರನ್ಗೆ ಆಲೌಟ್ ಮಾಡಿದ್ದ ಕರ್ನಾಟಕ, 414 ರನ್ ಕೂಡಿಹಾಕಿತ್ತು.
ಬಳಿಕ ಡೆಲ್ಲಿ ಸೆಕೆಂಡ್ ಇನ್ನಿಂಗ್ಸ್ನಲ್ಲಿ 164 ರನ್ಗೆ ಆಲೌಟ್ ಆಗಿ ಸೋತಿತು. ಕರ್ನಾಟಕ ಪರ ಕೆ. ಗೌತಮ್ 8, ಅರವಿಂದ್ 5, ಮಿಥುನ್ 4 ಮತ್ತು ಶ್ರೇಯಸ್ ಗೋಪಾಲ್ 3 ವಿಕೆಟ್ ಪಡೆದರು.
ಕರ್ನಾಟಕ ತಂಡ ಜಾರ್ಖಂಡ್ ವಿರುದ್ಧ ಮೊದಲ ಪಂದ್ಯವನ್ನ ಡ್ರಾ ಮಾಡಿಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.