ರಣಜಿ ಟ್ರೋಫಿ: ಕರ್ನಾಟಕಕ್ಕೆ ಮೊದಲ ಇನ್ನಿಂಗ್ಸ್ ಮುನ್ನಡೆ

Published : Jan 26, 2019, 10:43 AM IST
ರಣಜಿ ಟ್ರೋಫಿ: ಕರ್ನಾಟಕಕ್ಕೆ ಮೊದಲ ಇನ್ನಿಂಗ್ಸ್ ಮುನ್ನಡೆ

ಸಾರಾಂಶ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಕರ್ನಾಟಕ ಶ್ರೇಯಸ್ ಗೋಪಾಲ್, ಮನೀಶ್ ಪಾಂಡೆ ಹಾಗೂ ಶ್ರೀನಿವಾಸ್ ಶರತ್ ಅರ್ಧಶತಕಗಳ ನೆರವಿನಿಂದ 275 ರನ್ ಬಾರಿಸಿ ಆಲೌಟ್ ಆಗಿತ್ತು. ಆ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿತ್ತು.

ಬೆಂಗಳೂರು[ಜ.26]: ರೋನಿತ್ ಮೋರೆ, ಅಭಿಮನ್ಯು ಮಿಥುನ್ ಮಾರಕ ದಾಳಿಗೆ ತತ್ತರಿಸಿದ ಸೌರಾಷ್ಟ್ರ ಮೊದಲ ಇನ್ನಿಂಗ್ಸ್’ನಲ್ಲಿ ಕೇವಲ 236 ರನ್’ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಕರ್ನಾಟಕ 39 ರನ್’ಗಳ ಅಲ್ಪ ಮುನ್ನಡೆ ಪಡೆದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಕರ್ನಾಟಕ ಶ್ರೇಯಸ್ ಗೋಪಾಲ್, ಮನೀಶ್ ಪಾಂಡೆ ಹಾಗೂ ಶ್ರೀನಿವಾಸ್ ಶರತ್ ಅರ್ಧಶತಕಗಳ ನೆರವಿನಿಂದ 275 ರನ್ ಬಾರಿಸಿ ಆಲೌಟ್ ಆಗಿತ್ತು. ಆ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿತ್ತು. ಮೊದಲ ದಿನವೇ ರೋನಿತ್ ಮೋರೆ 5 ವಿಕೆಟ್ ಪಡೆದು ಮಿಂಚಿದ್ದರು. ಮೂರನೇ ದಿನದ ಆರಂಭದಲ್ಲೇ ಮಿಥುನ್ ಸತತ ಎರಡು ಎಸೆತಗಳಲ್ಲಿ 2 ವಿಕೆಟ್ ಪಡೆದು ಕರ್ನಾಟಕ ಮೇಲುಗೈ ಸಾಧಿಸಲು ನೆರವಾದರು. ಸೌರಾಷ್ಟ್ರ ಕೊನೆಯ 49 ಎಸೆತಗಳಲ್ಲಿ ಕೇವಲ 13 ರನ್ ಗಳಿಸಿ 6 ವಿಕೆಟ್ ಕಳೆದುಕೊಂಡಿತು.

ಕರ್ನಾಟಕ ಪರ ರೋನಿತ್ ಮೋರೆ 6 ವಿಕೆಟ್ ಕಬಳಿಸಿದರೆ, ಮಿಥುನ್ 3 ಹಾಗೂ ಶ್ರೇಯಸ್ ಗೋಪಾಲ್ 1 ವಿಕೆಟ್ ಪಡೆದರು. ಇನ್ನು ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ಆರ್ ಸಮರ್ಥ್ ವಿಕೆಟ್ ಕಳೆದುಕೊಂಡಿದೆ. ಇದೀಗ ಮಯಾಂಕ್ ಅಗರ್’ವಾಲ್ ಹಾಗೂ ಕೆ. ಸಿದ್ಧಾರ್ಥ್ ಬ್ಯಾಟಿಂಗ್ ನಡೆಸುತ್ತಿದ್ದು 6 ಓವರ್ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿದ್ದು ಒಟ್ಟಾರೆ 54 ರನ್’ಗಳ ಮುನ್ನಡೆ ಸಾಧಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20 World Cup 2026: ಇಂಗ್ಲೆಂಡ್‌ನ ಬಗ್ಗುಬಡಿದು ಫೈನಲ್‌ಗೇರುತ್ತಾ ಟೀಂ ಇಂಡಿಯಾ?
ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾಗೆ ಕಂಟಕವಾಗಬಲ್ಲ ಇಂಗ್ಲೆಂಡ್‌ನ ಈ ನಾಲ್ವರು ಆಟಗಾರರಿವರು!