ರಣಜಿ ಟ್ರೋಫಿ: ಮುಂಬೈ ವಿರುದ್ಧ ಅಬ್ಬರಿಸಿದ ಕರ್ನಾಟಕ!

Published : Nov 21, 2018, 05:52 PM IST
ರಣಜಿ ಟ್ರೋಫಿ: ಮುಂಬೈ ವಿರುದ್ಧ ಅಬ್ಬರಿಸಿದ ಕರ್ನಾಟಕ!

ಸಾರಾಂಶ

ಕರ್ನಾಟಕ ಹಾಗೂ ಮುಂಬೈ ನಡುವಿನ ರಣಜಿ ಪಂದ್ಯ 2ನೇ ದಿನದಾಟದಲ್ಲೂ ಕರ್ನಾಟಕ ಮೇಲುಗೈ ಸಾಧಿಸಿದೆ. ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ  ಕರ್ನಾಟಕ ಬಳಿಕ ಬೌಲಿಂಗ್‌ನಲ್ಲಿ 2 ವಿಕೆಟ್ ಕಬಳಿಸಿದೆ. ಇಲ್ಲಿದೆ 2ನೇ ದಿನದಾಟದ ಹೈಲೈಟ್ಸ್.

ಬೆಳಗಾವಿ(ನ.21): ಮುಂಬೈ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟದ ದ್ವಿತೀಯ ದಿನವೂ ಅಬ್ಬರಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್‌ಗೆ ಆಲೌಟ್ ಆದ ಕರ್ನಾಟಕ, ಮುಂಬೈ ತಂಡದ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ದಿನ ಶತಕ ಸಿಡಿಸಿದ ಕೆವಿ ಸಿದ್ಧಾರ್ಥ್ ದ್ವಿತೀಯ ದಿನವೂ ಬ್ಯಾಟಿಂಗ್ ಮುಂದುವರಿಸಿದರು. ಆದರೆ ಶ್ರೇಯಸ್ ಗೋಪಾಲ್  48 ರನ್ ಸಿಡಿಸಿ ಔಟಾದರು. ಬಿಆರ್ ಶರತ್ ಶೂನ್ಯ ಸುತ್ತಿದರು. ಆದರೆ ಜೆ ಸುಚಿತ್ 30 ರನ್ ಕಾಣಿಕೆ ನೀಡಿದರು.

ಉತ್ತಮ ಪ್ರದರ್ಶನ ನೀಡಿದ ಕೆವಿ ಸಿದ್ದಾರ್ಥ್ 161 ರನ್ ಸಿಡಿಸಿ ಔಟಾದರು. ಇನ್ನು ಅಭಿಮನ್ಯು ಮಿಥುನ್ ಅಜೇಯ 31 ರನ್ ಕಾಣಿಕೆ ನೀಡಿದರು. ಈ ಮೂಲಕ ಕರ್ನಾಟಕ 400 ರನ್‌ಗೆ ಆಲೌಟ್ ಆಯಿತು. ಮುಂಬೈ ಪರ ಶಿವಂ ದುಬೆ 7 ವಿಕೆಟ್ ಕಬಳಿಸಿ ಗಮನಸೆಳೆದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಮುಂಬೈ ಇಂಡಿಯನ್ಸ್ 42 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಅಖಿಲ್ ಹೆರ್ವಾಡ್ಕರ್ ಕೇವಲ 5 ರನ್ ಸಿಡಿಸಿ ಔಟಾದರು. ಆದರೆ ಜಯ್ ಗೋಕುಲ್ ಬಿಸ್ತಾ ಹಾಗೂ ಅಶಯ್ ಸರ್ದೇಸಾಯಿ ಜೊತೆಯಾಟದಿಂದ ಮುಂಬೈ ಚೇತರಿಸಿಕೊಂಡಿತು. ಅಶಯ್ 23 ರನ್ ಸಿಡಿಸಿ ಔಟಾದರು. ಗೋಕುಲ್ ಬಿಸ್ತಾ ಅಜೇಯ 69 ರನ್ ಸಿಡಿಸಿದರು.  ದಿನದಾಟದ ಅಂತ್ಯದಲ್ಲಿ ಮುಂಬೈ 2 ವಿಕೆಟ್ ನಷ್ಟಕ್ಕೆ 99 ರನ್ ಸಿಡಿಸಿದೆ. ಇನ್ನು 301 ರನ್ ಹಿನ್ನಡೆಯಲ್ಲಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?