
ಬೆಂಗಳೂರು[ಜ.18]: ಕರುಣ್ ನಾಯರ್[87*], ಮನೀಷ್ ಪಾಂಡೆ[61] ಅಜೇಯ ಅರ್ಧಶತಕಗಳ ನೆರವಿನಿಂದ ಕರ್ನಾಟಕ ತಂಡವು ರಣಜಿ ಟ್ರೋಫಿ ಟೂರ್ನಿಯಲ್ಲಿ ರಾಜಸ್ಥಾನವನ್ನು 6 ವಿಕೆಟ್’ಗಳಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿದೆ. ಮೊದಲ ಇನ್ನಿಂಗ್ಸ್’ನಲ್ಲಿ ಅಜೇಯ 83 ರನ್ ಸಿಡಿಸಿ ಕರ್ನಾಟಕ ತಂಡಕ್ಕೆ ಆಸರೆಯಾಗಿದ್ದ ಮಾಜಿ ನಾಯಕ ವಿನಯ್ ಕುಮಾರ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಮೂರನೇ ದಿನದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 45 ರನ್ ಬಾರಿಸಿದ್ದ ಕರ್ನಾಟಕ ಅಂತಿಮ ದಿನ ಪಂದ್ಯ ಗೆಲ್ಲಲು 139 ರನ್’ಗಳ ಅವಶ್ಯಕತೆಯಿತ್ತು. ನಾಲ್ಕನೇ ದಿನದಾಟ ಆರಂಭಿಸಿದ ಕರ್ನಾಟಕ ನೈಟ್ ವಾಚ್’ಮನ್ ರೋನಿತ್ ಮೋರೆ[8] ವಿಕೆಟ್ ಕಳೆದುಕೊಂಡಿತು. ಆ ಬಳಿಕ ಜತೆಯಾದ ಮನೀಶ್ ಪಾಂಡೆ-ಕರುಣ್ ನಾಯರ್ ಜೋಡಿ ಸೊಗಸಾದ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿಯನ್ನು ಬೇರ್ಪಡಿಸಲು ರಾಜಸ್ಥಾನ ನಾನಾ ಕಸರತ್ತು ನಡೆಸಿತಾದರೂ ಯಶಸ್ಸು ಕಾಣಲಿಲ್ಲ. ಮಹತ್ವದ ಪಂದ್ಯದಲ್ಲಿ ಜವಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಕರುಣ್ ನಾಯರ್ 129 ಎಸೆತಗಳಲ್ಲಿ 6 ಬೌಂಡರಿ ಸಹಿತ ಅಜೇಯ 61 ರನ್ ಬಾರಿಸಿದರು. ಇನ್ನು ಸ್ಫೋಟಕ ಬ್ಯಾಟಿಂಗ್ ನಡೆಸಿದ ನಾಯಕ ಮನೀಷ್ ಪಾಂಡೆ ಕೇವಲ 75 ಎಸೆತಗಳಲ್ಲಿ 14 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 87 ರನ್ ಬಾರಿಸಿ ಅಜೇಯರಾಗುಳಿದರು.
ಇದೀಗ ಉತ್ತರಪ್ರದೇಶ-ಸೌರಾಷ್ಟ್ರ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅರ್ಹತೆಗಿಟ್ಟಿಸುವ ತಂಡವು ಜನವರಿ 24-28ರವರೆಗೆ ನಡೆಯುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.