ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ ಶುಭಾಂಗ್ ಆಯ್ಕೆ

Published : Jan 05, 2019, 03:17 PM IST
ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ ಶುಭಾಂಗ್ ಆಯ್ಕೆ

ಸಾರಾಂಶ

ಕರ್ನಾಟಕ 7 ಪಂದ್ಯಗಳಲ್ಲಿ 3 ಗೆಲುವು, 3 ಡ್ರಾ, 1 ಸೋಲಿನೊಂದಿಗೆ ಒಟ್ಟು 27 ಅಂಕ ಪಡೆದಿದ್ದು, ‘ಎ’ ಹಾಗೂ ‘ಬಿ’ ಗುಂಪಿನ ಒಟ್ಟಾರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಬೆಂಗಳೂರು: ಜ. 7 ರಿಂದ ವಡೋದರಲ್ಲಿ ರಣಜಿ ಟ್ರೋಫಿ ಎಲೈಟ್ ‘ಎ’ ಗುಂಪಿನಲ್ಲಿ ಬರೋಡ ವಿರುದ್ಧ ನಡೆಯುವ ಪಂದ್ಯಕ್ಕೆ ಯುವ ಎಡಗೈ ಸ್ಪಿನ್ನರ್ ಶುಭಾಂಗ್ ಹೆಗ್ಡೆ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. 
ಕಿರಿಯರ ಕ್ರಿಕೆಟ್ ಟೂರ್ನಿಯಲ್ಲಿ ತೋರಿದ ಅದ್ಭುತ ಪ್ರದರ್ಶನದಿಂದಾಗಿ ಶುಭಾಂಗ್ ರಣಜಿ ತಂಡದಲ್ಲಿ ಮೊದಲ ಬಾರಿಗೆ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಣಜಿ ಟ್ರೋಫಿ: ಕ್ವಾರ್ಟರ್‌ ಫೈನಲ್‌ ಹೊಸ್ತಿಲಲ್ಲಿ ಕರ್ನಾಟಕ

ಅನುಭವಿ ಬ್ಯಾಟ್ಸ್‌ಮನ್‌ಗಳಾದ ಕರುಣ್ ನಾಯರ್ ಮತ್ತು ರವಿಕುಮಾರ್ ಸಮರ್ಥ್ ತಂಡಕ್ಕೆ ಮರಳಿದ್ದು, ಲಿಯಾನ್ ಖಾನ್ ಹಾಗೂ ದೇವದತ್ ಪಡಿಕ್ಕಲ್‌ರನ್ನು ಕೈ ಬಿಡಲಾಗಿದೆ. ಇನ್ನು ಕೈ ಬೆರಳಿನ ಗಾಯಕ್ಕೆ ತುತ್ತಾಗಿರುವ ಕೆ. ಗೌತಮ್ ಕೂಡ ತಂಡದಿಂದ ಹೊರಗುಳಿದಿದ್ದಾರೆ.

ಕರ್ನಾಟಕ 7 ಪಂದ್ಯಗಳಲ್ಲಿ 3 ಗೆಲುವು, 3 ಡ್ರಾ, 1 ಸೋಲಿನೊಂದಿಗೆ ಒಟ್ಟು 27 ಅಂಕ ಪಡೆದಿದ್ದು, ‘ಎ’ ಹಾಗೂ ‘ಬಿ’ ಗುಂಪಿನ ಒಟ್ಟಾರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಅಗ್ರಸ್ಥಾನದಲ್ಲಿರುವ ವಿದರ್ಭಕ್ಕಿಂತ ಕೇವಲ 1 ಅಂಕ ಹಿಂದಿರುವ ಕರ್ನಾಟಕ ಬರೋಡ ವಿರುದ್ಧ ಗೆಲುವು ಇಲ್ಲವೇ ಡ್ರಾ ಮಾಡಿಕೊಂಡರೂ ಅನಾಯಾಸವಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಲಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಪಂದ್ಯದಲ್ಲಿ ಅಳಿಯಲಿವೆ ಟೀಮ್ ಇಂಡಿಯಾದ 5 ದೊಡ್ಡ ಅಪಶಕುನಗಳು! ಇತಿಹಾಸ ಸೃಷ್ಟಿಸುತ್ತಾ ಭಾರತ?
T20 World Cup 2026: ಟಿ20 ವಿಶ್ವಕಪ್ ಫೈನಲ್ ಮಳೆಯಿಂದ ರದ್ದಾದ್ರೆ, ಟ್ರೋಫಿ ಯಾರಿಗೆ? ಇಲ್ಲಿದೆ ICC ರೂಲ್ಸ್