
ಲೀಡ್ಸ್(ಜು.17): ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಟೀಂ ಇಂಡಿಯಾಗೆ ಆಸರೆಯಾಗಿದ್ದ ನಾಯಕ ವಿರಾಟ್ ಕೊಹ್ಲಿ 71 ರನ್ ಸಿಡಿಸಿ ಔಟಾಗಿದ್ದಾರೆ.
ದಿಢೀರ್ ವಿಕೆಟ್ ಪತನದೊಂದಿಗೆ ಕಂಗಾಲಾಗಿದ್ದ ಭಾರತ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಪ್ರದರ್ಶನ ಸಮಾಧಾನ ತಂದಿತ್ತು. ಆದರೆ ಕೊಹ್ಲಿ 71 ರನ್ ಸಿಡಿಸಿ, ಆದಿಲ್ ರಶೀದ್ಗೆ ವಿಕೆಟ್ ಒಪ್ಪಿಸಿದರು.
156 ರನ್ಗಳಿಗೆ ಭಾರತ ಪ್ರಮುಖ 4 ವಿಕೆಟ್ ಕಳೆದುಕೊಂಡಿತು. 3ನೇ ಏಕದಿನ ಪಂದ್ಯದಲ್ಲೂ ಸುರೇಶ್ ರೈನಾ ಫಾರ್ಮ್ಗೆ ಮರಳಲಿಲ್ಲ. ರೈನಾ ಕೇವಲ 1 ರನ್ ಸಿಡಿಸಿ ನಿರ್ಗಮಿಸಿದರು. ಈ ಮೂಲಕ ಟೀಂ ಇಂಡಿಯಾ ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಿಸುತ್ತಿದೆ. ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯದ ಸರಣಿಯ 1-1 ಅಂತರದಲ್ಲಿ ಸಮಭಲಗೊಂಡಿದೆ. ಹೀಗಾಗಿ ಇಂದಿನ ಪಂದ್ಯ ಸರಣಿಯನ್ನ ನಿರ್ಧರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.