
ಬರ್ಮಿಂಗ್ಹ್ಯಾಮ್[ಜು.30]: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ 2 ದಿನ ಬಾಕಿ ಇರುವಾಗಲೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಮಹತ್ತರ ಬದಲಾವಣೆಗೆ ಭಾರತ ಮುಂದಾಗಿದೆ ಎನ್ನಲಾಗಿದೆ. ಅಭ್ಯಾಸ ಪಂದ್ಯದಲ್ಲಿ ಭಾರತದ ಆರಂಭಿಕ ವಿಭಾಗ ವೈಫಲ್ಯ ಕಂಡಿದ್ದರಿಂದ ಈ ಯೋಚನೆ ಭಾರತ ತಂಡದ ಪಾಳಯದಲ್ಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆ.1ರಿಂದ ಆರಂಭಗೊಳ್ಳಲಿರುವ ಟೆಸ್ಟ್ ಸರಣಿಯಲ್ಲಿ ಕೆ.ಎಲ್.ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಯುವ ಸಾಧ್ಯತೆಯಿದೆ ಎಂಬ ಸುಳಿವನ್ನು ತಂಡದ ಕೋಚ್ ರವಿ ಶಾಸ್ತ್ರಿ ಬಿಟ್ಟುಕೊಟ್ಟಿದ್ದಾರೆ. ಸ್ಥಳೀಯ ವಾಹಿನಿಯೊಂದರ ಜತೆ ಮಾತನಾಡಿರುವ ರವಿಶಾಸ್ತ್ರಿ, ‘ಮತ್ತೊಬ್ಬ ಆರಂಭಿಕ ಬ್ಯಾಟ್ಸ್ಮನ್ರನ್ನು ಮಧ್ಯಮ ಕ್ರಮಾಂಕದಲ್ಲಿ ಇಳಿಸುವ ಯೋಜನೆಯಿದೆ’ ಎಂದಿದ್ದಾರೆ. ಹೀಗಾಗಿ ಶಿಖರ್ ಧವನ್ ಹಾಗೂ ಮುರುಳಿ ವಿಜಯ್ ಆರಂಭಿಕರಾಗಿ ಕಣಕ್ಕಿಳಿದರೆ, ಮೂರನೇ ಕ್ರಮಾಂಕದಲ್ಲಿ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಪೂಜಾರ, ಆನಂತರ ರಾಹುಲ್ ಬ್ಯಾಟಿಂಗ್’ಗಿಳಿಯುವ ಸಾಧ್ಯತೆಯಿದೆ.
ರಾಹುಲ್ ಇನ್ನಿಂಗ್ಸ್ ಆರಂಭಿಸಲಿ: ಗಂಗೂಲಿ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಕೆ.ಎಲ್. ರಾಹುಲ್ ಮತ್ತು ಮುರಳಿ ವಿಜಯ್ ಇನ್ನಿಂಗ್ಸ್ ಆರಂಭಿಸುವುದು ಸೂಕ್ತ ಎಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯ ಪಟ್ಟಿದ್ದಾರೆ.
ವಿದೇಶಿ ನೆಲದಲ್ಲಿ ಧವನ್ ಟೆಸ್ಟ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿಲ್ಲ. ದ.ಆಫ್ರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾದಲ್ಲಿ ಧವನ್ ಆಟವೇ ಇದಕ್ಕೆ ಸಾಕ್ಷಿ’ ಎಂದಿದ್ದಾರೆ.
‘ಭುವಿ, ಬುಮ್ರಾ ಅನುಪಸ್ಥಿತಿ ಕಾಡಲ್ಲ’
‘ಭಾರತ ಕ್ರಿಕೆಟ್ ತಂಡದ ವೇಗದ ವಿಭಾಗದಲ್ಲಿ ಎಂದಿಗೂ ಕಾಡುವುದಿಲ್ಲ. ಭುವನೇಶ್ವರ್ ಮತ್ತು ಬುಮ್ರಾ ಅನುಪಸ್ಥಿತಿಯನ್ನು ಇತರೆ ವೇಗಿಗಳು ಸಮರ್ಥವಾಗಿ ತುಂಬಲಿದ್ದಾರೆ’ ಎಂದು ಇಂಗ್ಲೆಂಡ್ನ ಮಾಜಿ ವೇಗಿ ಡರೆನ್ ಗೌ ಹೇಳಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ವಿರುದ್ಧದ ಮೊದಲ 3 ಟೆಸ್ಟ್ಗೆ ಭುವಿ ಹಾಗೂ ಬುಮ್ರಾ ಅಲಭ್ಯರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.