
ಚೆನ್ನೈ(ಫೆ.13): ಯುವ ಸ್ಪಿನ್ನರ್ಗಳಾದ ಯಜುವೇಂದ್ರ ಚಾಹಲ್ ಹಾಗೂ ಕುಲ್ದೀಪ್ ಯಾದವ್'ರ ಪ್ರಚಂಡ ಪ್ರದರ್ಶನದಿಂದಾಗಿ ಭಾರತ ಸೀಮಿತ ಓವರ್ ಕ್ರಿಕೆಟ್ ತಂಡದಿಂದ ಹೊರಬಿದ್ದಿರುವ ಹಿರಿಯ ಆಫ್ ಸ್ಪಿನ್ನರ್ ಆರ್.ಅಶ್ವಿನ್, ತಂಡಕ್ಕೆ ಮರಳಲು ಹೊಸ ಯೋಜನೆ ಕೈಗೆತ್ತಿಕೊಂಡಿದ್ದಾರೆ.
ಅಶ್ವಿನ್ ಲೆಗ್'ಸ್ಪಿನ್ ಬೌಲಿಂಗನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಪ್ರಯೋಗಿಸುತ್ತಿದ್ದಾರೆ. ಈ ಹಿಂದೆ ಇಂಗ್ಲೆಂಡ್ ಕೌಂಟಿಯಲ್ಲಿ ಆಡುವಾಗಲೂ ಅಶ್ವಿನ್ ಲೆಗ್ ಸ್ಪಿನ್ ಬೌಲಿಂಗ್ ಮಾಡಿ ಯಶಸ್ಸು ಸಾಧಿಸಿದ್ದರು.
ಮುಂಬರುವ ಐಪಿಎಲ್'ನಲ್ಲಿ ಪಂಜಾಬ್ ಪರ ಆಡಲಿರುವ ಅವರು, ಲೆಗ್ ಸ್ಪಿನ್, ಗೂಗ್ಲಿ ಎಸೆತಗಳೊಂದಿಗೆ ಆಯ್ಕೆಗಾರರ ಗಮನ ಸೆಳೆಯಲು ಎದುರು ನೋಡುತ್ತಿದ್ದಾರೆ ಎನ್ನಲಾಗಿದೆ. ಲೆಗ್ ಸ್ಪಿನ್ನರ್ ಆಗಿ ಅಶ್ವಿನ್ ಯಶಸ್ಸು ಕಾಣಲಿದ್ದಾರೆ ಎಂದು ವೆಟ್ಟೋರಿ, ಪನೇಸಾರ್ ಅಭಿಪ್ರಾಯಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.