
ನವದೆಹಲಿ(ಫೆ.27): ಐಪಿಎಲ್ 11ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಭಾರತದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುನ್ನಡೆಸಲಿದ್ದಾರೆ ಎಂದು ತಂಡದ ಆಡಳಿತ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಯುವರಾಜ್ ಸಿಂಗ್, ಕ್ರಿಸ್ ಗೇಲ್ ಹಾಗೂ ಅಶ್ವಿನ್ ಈ ಮೂವರ ಪೈಕಿ ಒಬ್ಬರು ನಾಯಕರಾಗಬಹುದು ಎಂದು ಊಹಿಸಲಾಗಿತ್ತು.
ನಾಯಕತ್ವ ವಹಿಸಿಕೊಂಡಿರುವ ಅಶ್ವಿನ್, ‘ಪ್ರತಿಭಾನ್ವಿತ ಆಟಗಾರರಿಂದ ಕೂಡಿರುವ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಿರುವುದಕ್ಕೆ ತಂಡದ ಆಡಳಿತಕ್ಕೆ, ಮಾಲೀಕರಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ಇದು ನನಗೆ ಹೆಮ್ಮೆಯ ವಿಚಾರ’ ಎಂದಿದ್ದಾರೆ. ‘ನನ್ನ ಮೇಲೆ ಯಾವುದೇ ಒತ್ತಡವಿಲ್ಲ. 21ನೇ ವಯಸ್ಸಿನಲ್ಲೇ ರಾಜ್ಯ ತಂಡವನ್ನು ಮುನ್ನಡೆಸಿದ್ದೇನೆ. ನಾಯಕತ್ವ ನನಗೆ ಹೊಸದಲ್ಲ’ ಎಂದು ಅಶ್ವಿನ್ ಹೇಳಿದ್ದಾರೆ.
ಕಳೆದ 8 ವರ್ಷಗಳ ಕಾಲ ಚೆನ್ನೈ ಸೂಪರ್'ಕಿಂಗ್ಸ್ ತಂಡವನ್ನು ಪ್ರತಿನಿಧಿಸಿದ್ದ ಅಶ್ವಿನ್, ಎರಡು ಬಾರಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗಿದ್ದರು. ಅಶ್ವಿನ್ ಪುಣೆ ಸೂಪರ್'ಜೈಂಟ್ಸ್ ಪರವಾಗಿಯೂ ಕಣಕ್ಕಿಳಿದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.