
ಬೆಂಗಳೂರು[ನ.16]: 2019ರ ಐಪಿಎಲ್ಗೆ ತಂಡಗಳು ಸಿದ್ಧತೆ ಆರಂಭಿಸಿದ್ದು, ಮೊದಲ ಹಂತದಲ್ಲಿ ತಮಗೆ ಅಗತ್ಯವಿಲ್ಲ ಎನಿಸಿದ ಆಟಗಾರರನ್ನು ಹೊರಹಾಕಿವೆ.
ತಂಡಗಳು ತಾವು ಉಳಿಸಿಕೊಳ್ಳುವ ಹಾಗೂ ಹೊರಹಾಕುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಗುರುವಾರ ಅಂತಿಮ ದಿನವಾಗಿತ್ತು. ಅದರಂತೆ ಆರ್ಸಿಬಿ ತಂಡ ತಾನು ಉಳಿಸಿಕೊಂಡಿರುವ 15 ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ತಂಡದಲ್ಲಿದ್ದ ಕರ್ನಾಟಕದ ಪವನ್ ದೇಶಪಾಂಡೆ ಹಾಗೂ ಅನಿರುದ್ಧ ಜೋಶಿಯನ್ನು ಹೊರಹಾಕಿದೆ.
ಕಳೆದ ಆವೃತ್ತಿಯಲ್ಲಿ ನಾಮಕಾವಸ್ತೆಗೆ ಇಬ್ಬರು ಕನ್ನಡಿಗರನ್ನು ಖರೀದಿಸಿದ್ದ ಆರ್ಸಿಬಿ, ಒಂದೂ ಪಂದ್ಯದಲ್ಲಿ ಆಡಿಸಿರಲಿಲ್ಲ. ಕೊಹ್ಲಿ ನೇತೃತ್ವದ ತಂಡ ಒಟ್ಟು 10 ಆಟಗಾರರನ್ನು ಕೈಬಿಟ್ಟಿದ್ದು ಆ ಪೈಕಿ ಬ್ರೆಂಡನ್ ಮೆಕ್ಕಲಂ, ಕೋರಿ ಆ್ಯಂಡರ್ಸನ್, ಸರ್ಫರಾಜ್ ಖಾನ್, ಕ್ರಿಸ್ ವೋಕ್ಸ್ ಪ್ರಮುಖರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.