
ಬೆಂಗಳೂರು(ಏ.25): ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 17 ರನ್ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ. ಈ ಪಂದ್ಯದ ಅಂತಿಮ ಓವರ್ನಲ್ಲಿ ಬೆಂಗಳೂರು ಗೆಲುವಿನ ದಡ ಸೇರಿತು. ಪಂಜಾಬ್ ಗೆಲುವಿಗೆ ಅಂತಿಮ ಓವರ್ನಲ್ಲಿ 27 ರನ್ ಬೇಕಿತ್ತು. ಉಮೇಶ್ ಯಾದವ್ 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಅಂತಿಮ ಓವರ್ನಲ್ಲಿ ಕೇವಲ 9 ರನ್ ನೀಡಿ RCB ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.
ಉಮೇಶ್ ಯಾದವ್ ಅಂತಿಮ ಓವರ್ನಲ್ಲಿ ಅದ್ಬುತ ಬೌಲಿಂಗ್ ದಾಳಿ ಸಂಘಟಿಸಿದ್ದಾರೆ. ಈ ಗೆಲುವಿನ ಬಳಿಕ ಉಮೇಶ್ ಯಾದವ್ ಅಂತಿಮ ಓವರ್ ಕುರಿತು ಹಲವರು ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.