
ಬೆಂಗಳೂರು(ಮೇ.20): ಎಲಿಮಿನೇಟರ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಪ್ಲೇ-ಆಫ್ ಪಂದ್ಯಗಳಿಗೆ ಮೀಸಲು ದಿನ ಇಲ್ಲದಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.
ಈ ವಿಚಾರವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಆವೃತ್ತಿಯಿಂದ ಪ್ಲೇ-ಆಫ್ ವೇಳಾಪಟ್ಟಿಗೆ ಮೀಸಲು ದಿನಗಳನ್ನು ಸೇರಿಸುವ ಕುರಿತು ಚಿಂತನೆ ನಡೆಸಲಾಗಿದೆ.
ಸತತ ಆರುವಾರಗಳ ಕಾಲ ಉತ್ತಮ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾದರೆ, ಕೆಲತಂಡಗಳು ನಿರಾಸೆ ಅನುಭವಿಸಬೇಕಾಗಿ ಬರುತ್ತದೆ. ಹೀಗಾಗಿ ಪ್ಲೇ ಆಫ್ ಪಂದ್ಯಗಿಗೂ ಮೀಸಲು ದಿನವಿರಬೇಕೆಂಬ ಒತ್ತಾಯ ಬಲವಾಗಿ ಕೇಳಿಬರುತ್ತಿದೆ.
ಇಂದು ಹೈದರಾಬಾದ್ನಲ್ಲಿ ಐಪಿಎಲ್ ಆಡಳಿತ ಸಮಿತಿ ಸಭೆ ನಡೆಯಲಿದ್ದು, ಈ ಬಗ್ಗೆ ಚರ್ಚಿಸಲಾಗುವುದು ಎಂದು ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.