
ನವದೆಹಲಿ(ಅ.03): ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಹೊರತಾಗಿಯೂ, ಅಜಿಂಕ್ಯ ರಹಾನೆ ಅವರನ್ನು ಟಿ20 ತಂಡದಿಂದ ಕೈಬಿಟ್ಟಿರುವ ಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಆಯ್ಕೆಗಾರರ ನಿರ್ಧಾರವನ್ನು ಗೌರವಿಸುವುದಾಗಿ ಹೇಳಿದ್ದಾರೆ.
‘ನಾವು ಹೆಚ್ಚೆಚ್ಚು ಪಂದ್ಯಗಳನ್ನು ಆಡುತ್ತೇವೆ. ತಂಡದ ಆಡಳಿತ, ಆಯ್ಕೆಗಾರರು ನನ್ನನ್ನು ಆಡಿಸದಿರಲು ನಿರ್ಧರಿಸಿದ್ದಾರೆ. ಅದನ್ನು ನಾನು ಗೌರವಿಸುತ್ತೇನೆ. ತಂಡದಲ್ಲಿ ಸ್ಪರ್ಧೆ ಹೆಚ್ಚಾದಷ್ಟು, ನಮ್ಮಲ್ಲಿ ಉತ್ಸಾಹ ಹೆಚ್ಚಾಗುತ್ತದೆ. ಇನ್ನಷ್ಟು ಉತ್ತಮ ಪ್ರದರ್ಶನ ತೋರಬೇಕು ಎನ್ನುವ ಗುರಿ ಹೊಂದಲು ನೆರವಾಗುತ್ತದೆ ಎಂದು ರಹಾನೆ ಹೇಳಿದ್ದಾರೆ
ಇದೇ ವೇಳೆ ತಂಡ ನನಗೆ ನೀಡುವ ಪ್ರತಿಯೊಂದು ಜವಾಬ್ದಾರಿಗೂ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ, ಒಟ್ಟಾರೆ ನನ್ನ ಪ್ರದರ್ಶನದ ಬಗ್ಗೆ ನನಗೆ ತೃಪ್ತಿಯಿದೆ’ ಎಂದು ರಹಾನೆ ಹೇಳಿದ್ದಾರೆ. ರಹಾನೆ ಏಕದಿನ ಸರಣಿಯಲ್ಲಿ ಸತತ 4 ಅರ್ಧಶತಕಗಳ ನೆರವಿನಿಂದ 244 ರನ್ ಬಾರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.