
ಉತರಪ್ರದೇಶ(ಆ.14): ಐಪಿಎಲ್ ಟೂರ್ನಿ ಭಾರತೀಯ ಯುವ ಪ್ರತಿಭೆಗಳಿಗೆ ಅತ್ಯುತ್ತಮ ಅವಕಾಶ ಕಲ್ಪಿಸಿದೆ. ಐಪಿಎಲ್ ಟೂರ್ನಿ ಮೂಲಕ ಯುವ ಪ್ರತಿಭೆಗಳು ಟೀಂ ಇಂಡಿಯಾವನ್ನ ಪ್ರತಿನಿಧಿಸಿದ್ದಾರೆ. ಇಷ್ಟೇ ಅಲ್ಲ, ಈ ಐಪಿಎಲ್ ಟೂರ್ನಿಯಿಂದ ಅದೆಷ್ಟೋ ಕ್ರಿಕೆಟಿಗರು ಆರ್ಥಿಕ ಸ್ಥಿತಿಯೂ ಉತ್ತಮವಾಗಿದೆ.
2018ರ ಐಪಿಎಲ್ ಟೂರ್ನಿಯ ಹರಾಜಿನಲ್ಲಿ ಉತರ ಪ್ರದೇಶ ಬ್ಯಾಟ್ಸ್ಮನ್ ರಿಂಕು ಸಿಂಗ್ 80 ಲಕ್ಷ ರೂಪಾಯಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪಾಲಾಗಿದ್ದರು. ಕೆಕೆಆರ್ ಪರ 4 ಪಂದ್ಯ ಆಡಿದ ರಿಂಕು ಸಿಂಗ್, ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆದರೆ ಮನೀಶ್ ಪಾಂಡೆ ಕ್ಯಾಚ್ ಹಿಡಿದು ಜನಪ್ರೀಯರಾಗಿದ್ದಾರೆ.
ಕಳೆದ ಐಪಿಎಲ್ ಟೂರ್ನಿಯಲ್ಲಿ ರಿಂಕು ಸಿಂಗ್ಗೆ ಹೆಚ್ಚಿನ ಅವಕಾಶ ಸಿಗಲಿಲ್ಲ. ಆದರೆ ತಮ್ಮ ಕನಸನ್ನ ನನಸು ಮಾಡಿಕೊಳ್ಳಲು ಐಪಿಎಲ್ ಸಹಕಾರಿಯಾಗಿದೆ. ಐಪಿಎಲ್ ಹರಾಜಿನಲ್ಲಿ ಬಂದ ಹಣದಿಂದ ರಿಂಕು ಸಿಂಗ್ ತಮ್ಮ ಹುಟ್ಟೂರಿನಲ್ಲಿ ಮನೆ ಕಟ್ಟಿಸಿದ್ದಾರೆ. ಈ ಮೂಲಕ ತಮ್ಮ ಬಹುದಿನಗಳ ಕನಸನ್ನ ನನಸು ಮಾಡಿಕೊಂಡಿದ್ದಾರೆ.
ಸ್ವಂತ ಮನೆ ಕಟ್ಟೋ ಮೊದಲು ರಿಂಕು ಸಿಂಗ್, ಗ್ಯಾಸ್ ಕಂಪೆನಿಯ ಗೊಡೌನ್ ನಲ್ಲಿನ 2 ರೂಮ್ನಲ್ಲಿ ವಾಸ್ತವ್ಯವಿದ್ದರು. ಇದೀಗ ಸ್ವಂತ ಮನೆ ಕಟ್ಟಿರುವ ರಿಂಕು ಪೋಷಕರ ಸಂತಸಕ್ಕೆ ಕಾರಣವಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.