
ನವದೆಹಲಿ: ಐಪಿಎಲ್ನಲ್ಲಿ ಮತ್ತೊಮ್ಮೆ ಫಿಕ್ಸಿಂಗ್ ವದಂತಿ ಹಬ್ಬಿದೆ. ಶನಿವಾರ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ನ ವಿಕೆಟ್ ಕೀಪರ್ ರಿಷಭ್ ಪಂತ್ರ ಹೇಳಿಕೆಯೊಂದನ್ನು ಆಧರಿಸಿ ಸಾಮಾಜಿಕ ತಾಣಗಳಲ್ಲಿ ಫಿಕ್ಸಿಂಗ್ ವದಂತಿ ಶುರುವಾಗಿದೆ.
ಪಂದ್ಯದ ವೇಳೆ ಪಂತ್, ‘ಈ ಎಸೆತ ಬೌಂಡರಿ ಹೋಗಲಿದೆ’ ಎಂದು ಹೇಳಿದ್ದು ಸ್ಟಂಪ್ ಮೈಕ್ನಲ್ಲಿ ದಾಖಲಾಗಿದೆ. ಪಂತ್ ಆ ರೀತಿ ಹೇಳುತ್ತಿದ್ದಂತೆ ಸಂದೀಪ್ ಲಮಿಚ್ಚಾನೆ ಎಸೆತವನ್ನು ರಾಬಿನ್ ಉತ್ತಪ್ಪ ಬೌಂಡರಿಗಟ್ಟಿದರು. ಈ ಪ್ರಸಂಗ ಎಲ್ಲರ ಕುತೂಹಲ ಕೆರಳಿಸಿದೆ.
ಸಾಮಾಜಿಕ ತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಪ್ರಸಂಗದ ಕುರಿತು ಬಿಸಿಸಿಐ ತುಟಿಬಿಚ್ಚಿದೆ. ಫಿಕ್ಸಿಂಗ್ ಆರೋಪವನ್ನು ತಳ್ಳಿ ಹಾಕಿರುವ ಬಿಸಿಸಿಐ, ಇಂತಹ ವದಂತಿಗಳು ಕ್ರಿಕೆಟ್ಗೆ ಮಾರಕ ಎಂದಿದೆ. ‘ಕ್ಷೇತ್ರರಕ್ಷಕರನ್ನು ಸರಿಯಾದ ಜಾಗದಲ್ಲಿ ನಿಲ್ಲಿಸದ ನಾಯಕ ಶ್ರೇಯಸ್ ಅಯ್ಯರ್ಗೆ ಎಚ್ಚರಿಸಲು ರಿಷಭ್ ಆ ರೀತಿ ಹೇಳಿದರು. ಕಾಕತಾಳಿಯ ಎಂಬಂತೆ ಉತ್ತಪ್ಪ ಬೌಂಡರಿ ಬಾರಿಸಿದರು. ಎರಡನ್ನೂ ಒಟ್ಟುಗೂಡಿಸಿ ಕೆಲವರು ಸಾಮಾಜಿಕ ತಾಣಗಳಲ್ಲಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ’ ಎಂದು ಬಿಸಿಸಿಐ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.