
ಲಂಡನ್(ಜು.24): ಟೀಂ ಇಂಡಿಯಾ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಎಂ ಎಸ್ ಧೋನಿ ಹಲವು ಯುವ ಕ್ರಿಕೆಟಿಗರಿಗೆ ಮಾರ್ಗದರ್ಶಕರಾಗಿದ್ದಾರೆ. ಧೋನಿ ನೆರವಿನಿಂದ ಹಲವು ಕ್ರಿಕೆಟಿಗರು ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ಗಳಾಗಿದ್ದಾರೆ. ಇದೀಗ ರಿಷಬ್ ಪಂತ್ ಆಯ್ಕೆಗೆ ಎಂ ಎಸ್ ಧೋನಿ ಕಾರಣ ಅನ್ನೋ ಮಾಹಿತಿ ಬಹಿರಂಗವಾಗಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಪಂತ್ ಕಿರಿಯ ವಯಸ್ಸಿನಲ್ಲೇ ಭಾರತ ತಂಡಕ್ಕೆ ಆಯ್ಕೆಯಾಗಲು ಧೋನಿ ಕಾರಣ ಎಂದು ರಿಷಬ್ ಹೇಳಿದ್ದಾರೆ.
ಧೋನಿ ನೀಡಿದ ಸಲಹೆ, ಮಾರ್ಗದರ್ಶನದಿಂದಲೇ ಈ ಸಾಧನೆ ಮಾಡಲು ಸಾಧ್ಯವಾಯಿತು. ಐಪಿಎಲ್ ಟೂರ್ನಿಯಲ್ಲಿ ಧೋನಿ ಬಳಿಯಿಂದ ಸಾಕಷ್ಟು ಕಲಿತಿದ್ದೇನೆ. ಪ್ರತಿ ಪಂದ್ಯಕ್ಕೂ ಮೊದಲು ಧೋನಿಯಿಂದ ನಾನು ಸಲಹೆ ಕೇಳುತ್ತಿದ್ದೆ ಎಂದು ಪಂತ್ ಹೇಳಿದ್ದಾರೆ.
ಕಳೆದ ಐಪಿಎಲ್ ಟೂರ್ನಿಯಲ್ಲಿ ರಿಷಬ್ ಪಂತ್ 684 ರನ್ ಸಿಡಿಸಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿಸಿದ 2ನೇ ಬ್ಯಾಟ್ಸ್ಮನ್ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಂತ್ ಮಾತ್ರವಲ್ಲ, ಇಶಾನ್ ಕಿಶನ್ ಸೇರಿದಂತೆ ಯುವ ವಿಕೆಟ್ಕೀಪರ್ಗಳು ಧೋನಿಯಿಂದ ಸಲಹೆ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.