
ಕೊಲಂಬೋ(ಆ.18): ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಕ್ತಾಯವಾಗಿದೆ. ಇನ್ನು ಅದರ ಬಗ್ಗೆಯೇ ಮಾತನಾಡುವುದು ಸರಿಯಲ್ಲ. ಮುಂಬರುವ ಏಕದಿನ ಹಾಗೂ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡದಲ್ಲಿ ಭದ್ರವಾಗಿ ಬೇರೂರುವತ್ತ ಗಮನಹರಿಸಲಿದ್ದೇನೆ ಎಂದು ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶವಂಚಿತರಾದ ಕುರಿತ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಶರ್ಮಾ, 'ನಾನೀಗ ಕೇವಲ ಏಕದಿನ ಪಂದ್ಯಗಳ ಕುರಿತು ಯೋಚನೆ ಮಾಡುತ್ತಿದ್ದೇನೆ' ಎಂದು ಉತ್ತರಿಸಿದ್ದಾರೆ.
ಯಾವ ಆಟಗಾರ ಕೂಡ ಆಡುವ ಹನ್ನೊಂದರ ಬಳಗದಿಂದ ಹೊರಗಿರಲು ಬಯಸುವುದಿಲ್ಲ. ಅಂದರೆ ಬೆಂಚ್ ಕಾಯಲು ಇಷ್ಟಪಡುವುದಿಲ್ಲ. ಆದರೆ ತಂಡದ ಯೋಜನೆಗಳು, ನಾಯಕ ಹಾಗೂ ಕೋಚ್ ಅವರ ಆಲೋಚನೆಗಳ ಮೇಲೆ ಎಲ್ಲವೂ ನಿರ್ಧಾರವಾಗಲಿದೆ' ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.