
ಕೋಲ್ಕತಾ(ಆ.02): ರೋಹಿತ್ ಶರ್ಮಾ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಸುಭದ್ರ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.
ಮೇಲ್ಪಂಕ್ತಿಯ ಆಟಗಾರರೆಲ್ಲ ಬೇಗನೆ ಪೆವಿಲಿಯನ್ ಸೇರಿ ಆತಂಕ ಮೂಡಿಸಿದ್ದರು. ಆದರೆ ವಿರಾಟ್ ಕೊಹ್ಲಿ(45), ರೋಹಿತ್ ಶರ್ಮಾ(82) ಅವರ ನೆರವಿನಿಂದ ಕಿವೀಸ್ ಎದುರು ಪ್ರಾಬಲ್ಯ ಮೆರೆಯಲು ಸಾಧ್ಯವಾಯಿತು. ಮೂರನೇ ದಿನದಾಟದ ಮುಕ್ತಾಯಕ್ಕೆ ಭಾರತ 227/8 ರನ್ ಗಳಿಸಿದೆ. ಒಟ್ಟಾರೆಯಾಗೆ ಟೀಂ ಇಂಡಿಯಾ 339 ರನ್'ಗಳ ಮುನ್ನೆಡೆ ಪಡೆದುಕೊಂಡಿದೆ. ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ವೃದ್ದಿಮಾನ್ ಸಾಹ(39), ಭುವನೇಶ್ವರ್ ಕುಮಾರ್(8) ನಾಳೆಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಇಂದು ಬೆಳಗ್ಗೆ 128/7 ರನ್'ಗಳೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ ತಂಡ 204 ರನ್ ಗಳಿಸುವಷ್ಟರಲ್ಲೇ ಆಲೌಟ್ ಆಯಿತು. ಬಿರುಸಿನ ಬ್ಯಾಟ್ ಬೀಸಿದ ಜೀತನ್ ಪಟೇಲ್ 47 ರನ್'ಗಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.