ಇಂದಿನ ಪಂದ್ಯದಲ್ಲಿ ಆರ್'ಸಿಬಿ ತಂಡ ಹೀಗಿರಬಹುದು; ಇಂದು ಪ್ರಯೋಗ ಮಾಡುತ್ತಾರ ಕೊಹ್ಲಿ..?

Published : Apr 25, 2018, 06:25 PM IST
ಇಂದಿನ ಪಂದ್ಯದಲ್ಲಿ ಆರ್'ಸಿಬಿ ತಂಡ ಹೀಗಿರಬಹುದು; ಇಂದು ಪ್ರಯೋಗ ಮಾಡುತ್ತಾರ ಕೊಹ್ಲಿ..?

ಸಾರಾಂಶ

ಮಳೆ ಭೀತಿಯ ನಡುವೆಯೂ ಆರ್'ಸಿಬಿ-ಸಿಎಸ್'ಕೆ ತಂಡಗಳು ಇಂದು ಚಿನ್ನಸ್ವಾಮಿ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿವೆ. ಈಗಾಗಲೇ ಆಡಿದ 5 ಪಂದ್ಯಗಳಲ್ಲಿ 2ರಲ್ಲಿ ಮಾತ್ರ ಜಯ ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ ಮತ್ತೊಂದು ಜಯದ ಕನವರಿಕೆಯಲ್ಲಿದೆ. ಇಂದಿನ ಪಂದ್ಯದಲ್ಲಿ ಆರ್'ಸಿಬಿ ತಂಡದ ಆಡುವ 11ರ ಬಳಗದಲ್ಲಿ ಈ ಆಟಗಾರರು ಸ್ಥಾನ ಪಡೆದುಕೊಳ್ಳುವ ಸಾಧ್ಯತೆಯಿದೆ.

ಬೆಂಗಳೂರು(ಏ.25): ಮಳೆ ಭೀತಿಯ ನಡುವೆಯೂ ಆರ್'ಸಿಬಿ-ಸಿಎಸ್'ಕೆ ತಂಡಗಳು ಇಂದು ಚಿನ್ನಸ್ವಾಮಿ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿವೆ. ಈಗಾಗಲೇ ಆಡಿದ 5 ಪಂದ್ಯಗಳಲ್ಲಿ 2ರಲ್ಲಿ ಮಾತ್ರ ಜಯ ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ ಮತ್ತೊಂದು ಜಯದ ಕನವರಿಕೆಯಲ್ಲಿದೆ.

ಇಂದಿನ ಪಂದ್ಯದಲ್ಲಿ ಆರ್'ಸಿಬಿ ತಂಡದ ಆಡುವ 11ರ ಬಳಗದಲ್ಲಿ ಈ ಆಟಗಾರರು ಸ್ಥಾನ ಪಡೆದುಕೊಳ್ಳುವ ಸಾಧ್ಯತೆಯಿದೆ.

ಮನನ್ ವೋಹ್ರಾ-ಪಾರ್ಥಿವ್ ಪಟೇಲ್: ಇಂದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಕೆಲ ಬದಲಾವಣೆ ಮಾಡುವ ಸಾಧ್ಯತೆಯಿದೆ. ಕ್ವಿಂಟಾನ್ ಡಿಕಾಕ್ ಬದಲಿಗೆ ಇಂದು ಪಾರ್ಥಿವ್ ಪಟೇಲ್ ಸ್ಥಾನ ಪಡೆಯಬಹುದು. ಕೀಪಿಂಗ್ ಹಾಗೂ ಬ್ಯಾಟಿಂಗ್'ನಲ್ಲಿ ತಂಡಕ್ಕೆ ಪಾರ್ಥಿವ್ ಉಪಯುಕ್ತ ಕಾಣಿಕೆ ನೀಡಬಲ್ಲರು. ಇನ್ನು ಮನನ್ ವೋಹ್ರಾ ಮೊದಲ ಪಂದ್ಯದಲ್ಲಿ ವಿಫಲವಾಗಿದ್ದರೂ ಇಂದು ಮತ್ತೊಂದು ಅವಕಾಶ ಸಿಗಬಹುದು. ಜೊತೆಗೆ ಈ ಜೋಡಿ ಆರಂಭಿರಾಗಿ ಕಣಕ್ಕಿಳಿದರೆ ಅಚ್ಚರಿಯಿಲ್ಲ.

ಕೊಹ್ಲಿ-ಎಬಿಡಿ-ಮನ್ದೀಪ್ ಸಿಂಗ್: ಆರ್'ಸಿಬಿ ಮಧ್ಯಮ ಕ್ರಮಾಂಕ ಬಲಿಷ್ಠವಾಗಿದ್ದು, ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಮನ್ದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಆಲ್ರೌಂಡರ್ ವಿಭಾಗ: ಆಲ್ರೌಂಡರ್ ವಿಭಾಗದಲ್ಲೂ ಆರ್'ಸಿಬಿ ಇಂದು ಕೆಲ ಬದಲಾವಣೆ ಮಾಡಬಹುದಾಗಿದೆ. ಕ್ರಿಸ್ ವೋಕ್ಸ್ ಜೊತೆಗೆ ಇಂದು ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿ ಕೂಡಾ ಸ್ಥಾನ ಪಡೆಯಬಹುದು. ಇದುವರೆಗೂ ಮೋಯಿನ್ ಅಲಿಗೆ ಆರ್'ಸಿಬಿ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಬ್ಯಾಟಿಂಗ್ ಹಾಗೂ ಬೌಲಿಂಗ್'ನಲ್ಲಿ ಉತ್ತಮ ಫಾರ್ಮ್'ನಲ್ಲಿರುವ ಅಲಿಗೆ ಅವಕಾಶ ಸಿಗಬಹುದು. ಜೊತೆಗೆ ವಾಷಿಂಗ್ಟನ್ ಸುಂದರ್'ಗೆ ಕೂಡಾ ಸ್ಥಾನ ಸಿಗಬಹುದು.

ಬೌಲಿಂಗ್: ಬೌಲಿಂಗ್'ನಲ್ಲಿ ಉಮೇಶ್ ಯಾದವ್ ಜೊತೆಗೆ ಥೀಮ್ ಸೌಥಿ ಹೊಸ ಚೆಂಡು ಹಂಚಿಕೊಂಡು ದಾಳಿ ನಡೆಸುವ ಸಾಧ್ಯತೆಯಿದೆ. ಸೌಥಿ ತಂಡದಲ್ಲಿ ಸ್ಥಾನ ಪಡೆದರೆ ಡೆತ್ ಓವರ್'ಗಳಲ್ಲಿ ರನ್ ವೇಗಕ್ಕೆ ಕಡಿವಾಣ ಹಾಕಬಹುದಾಗಿದೆ. ಯಾಕೆಂದರೆ ಈ ಹಿಂದಿನ ಪಂದ್ಯಗಳಲ್ಲಿ ಆರ್'ಸಿಬಿ ಡೆತ್ ಓವರ್'ಗಳಲ್ಲಿ ಸಾಕಷ್ಟು ರನ್ ಬಿಟ್ಟುಕೊಟ್ಟಿದೆ. ಇನ್ನು ಮಣಿಕಟ್ಟಿನ ಸ್ಪಿನ್ನರ್ ಯುಜುವೇಂದ್ರ ಚಾಹಲ್ ನಿರೀಕ್ಷೆಯಂತೆಯೇ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!