
ನವದೆಹಲಿ(ನ.04): ಐಪಿಎಲ್ ಕಳ್ಳಾಟದಲ್ಲಿ ತೊಡಗಿದ್ದ ಹಲವರು ಹೆಸರನ್ನು ಬಿಸಿಸಿಐ ಬಹಿರಂಗಗೊಳಿಸಿಲ್ಲ ಎಂದು ಶ್ರೀಶಾಂತ್ ಮಾಡಿರುವ ಆರೋಪ ನಿರಾಧಾರವಾದುದು ಎಂದು ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಭದ್ರತಾ ಸಮಿತಿ ಮುಖ್ಯಸ್ಥ ನೀರಜ್ ಕುಮಾರ್ ತಿಳಿಸಿದ್ದಾರೆ.
‘ಬಿಸಿಸಿಐ ಯಾವುದೇ ತಾರತಮ್ಯ ಮಾಡುತ್ತಿಲ್ಲ. ನಿಷೇಧಿಸಲ್ಪಟ್ಟ ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುತ್ತಿಲ್ಲ. ಸ್ಥಳೀಯ ಪಂದ್ಯಗಳಲ್ಲಿ ಆಡುತ್ತಿರಬಹುದು, ಹಾಗಾಗಿ ಅದು ಬಿಸಿಸಿಐನ ಗಮನಕ್ಕೆ ಬಂದಿಲ್ಲ’ ಎಂದಿದ್ದಾರೆ.
2013ರಲ್ಲಿ ಶ್ರೀಶಾಂತ್ ಅವರನ್ನು ಸ್ಫಾಟ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐ ಆಜೀವ ನಿಷೇಧ ಹೇರಿದೆ.
ಸುಪ್ರೀಂ ಮೆಟ್ಟಿಲೇರುವೆ: ತಮ್ಮ ವಿರುದ್ಧ ಹೇರಿರುವ ಆಜೀವ ನಿಷೇಧ ತೆರವುಗೊಳಿಸುವಂತೆ ಮನವಿ ಮಾಡಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಶ್ರೀಶಾಂತ್ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.