ಮತ್ತೆ ಬಿಸಿಸಿಐ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಶಾಂತ್

Published : Aug 19, 2017, 09:01 AM ISTUpdated : Apr 11, 2018, 01:05 PM IST
ಮತ್ತೆ ಬಿಸಿಸಿಐ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಶಾಂತ್

ಸಾರಾಂಶ

‘ನ್ಯಾಯಾಲಯದ ಮಧ್ಯಸ್ಥಿಕೆ ಇಲ್ಲದೆ ಬಿಸಿಸಿಐ ನಿರಾಕ್ಷೇಪಣ ಪತ್ರ ನೀಡುವುದು ಅನುಮಾನ’ ಎಂದು ಶ್ರೀಶಾಂತ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಕೊಚ್ಚಿ(ಆ.19): ಸ್ಕಾಟ್ಲೆಂಡ್‌'ನ ಪ್ರೀಮಿಯರ್ ಲೀಗ್‌'ನ ಗ್ಲೆನ್ ರೋಥ್ಸ್ ಕ್ರಿಕೆಟ್ ಕ್ಲಬ್ ಪರ ಆಡುವುದಕ್ಕೆ ನಿರಾಕ್ಷೇಪಣ ಪತ್ರ ನೀಡಲು ಬಿಸಿಸಿಐಗೆ ಆದೇಶಿಸುವಂತೆ ಕೋರಿ, ಶ್ರೀಶಾಂತ್ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ.

‘ನ್ಯಾಯಾಲಯದ ಮಧ್ಯಸ್ಥಿಕೆ ಇಲ್ಲದೆ ಬಿಸಿಸಿಐ ನಿರಾಕ್ಷೇಪಣ ಪತ್ರ ನೀಡುವುದು ಅನುಮಾನ’ ಎಂದು ಶ್ರೀಶಾಂತ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ 9ರ ವೇಳೆಗೆ ಲೀಗ್ ಅಂತ್ಯಗೊಳ್ಳಲಿದ್ದು, ಶೀಘ್ರ ಕ್ರಮಕ್ಕೆ ಕೇರಳ ಕ್ರಿಕೆಟಿಗ ಮನವಿ ಮಾಡಿದ್ದಾರೆ.

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಶಾಂತ್ ವಿರುದ್ಧ ಬಿಸಿಸಿಐ ಹೇರಿದ್ದ ಆಜೀವ ನಿಷೇಧವನ್ನು ಕೇರಳ ಹೈಕೋರ್ಟ್ ಆ.7ರಂದು ತೆರವುಗೊಳಿಸಿತ್ತು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿಗೆ ವಿದಾಯ ಹೇಳಿದ ಆರ್‌ಸಿಬಿ, ತವರಿನ ಪಂದ್ಯಗಳಿಗೆ ಛತ್ತೀಸ್‌ಗಢದ ರಾಯ್ಪುರ ಆತಿಥ್ಯ ಖಚಿತಪಡಿಸಿದ ಫ್ರಾಂಚೈಸಿ!
ಡಿವೋರ್ಸ್ ಬಳಿಕ ಯುಜುವೇಂದ್ರ ಚಹಲ್, ಧನಶ್ರೀ ವರ್ಮಾ ಮತ್ತೆ ಒಂದಾಗ್ತಾರಾ? ಮೌನ ಮುರಿದ ಚಹಲ್!