
ನವದೆಹಲಿ(ಫೆ.02): ಆರನೇ ಐಪಿಎಲ್ ಸಂದರ್ಭದಲ್ಲಿ ನಡೆಯಿತ್ತೆನ್ನಲಾದ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ 27 ದಿನಗಳ ಜೈಲುವಾಸ ಅನುಭವಿಸಿದ ಕ್ರಿಕೆಟಿಗ ಶ್ರೀಶಾಂತ್, ಬಿಸಿಸಿಐ ವಿರುದ್ಧ ತಿರುಗಿಬಿದ್ದಿದ್ದಾರೆ.
2015ರ ಜುಲೈನಲ್ಲಿ ಪ್ರಕರಣದಿಂದ ನ್ಯಾಯಾಲಯವೇ ನನ್ನನ್ನು ದೋಷಮುಕ್ತಗೊಳಿಸಿದೆ. ಆದರೆ, ಬಿಸಿಸಿಐ ಆಜೀವ ನಿಷೇಧ ಹೇರಿರುವುದನ್ನು ಪತ್ರದಲ್ಲಾಗಲೀ ಇಲ್ಲವೇ ಇ-ಮೇಲ್ ಮೂಲಕವಾಗಲೀ ತಿಳಿಸಿಲ್ಲ ಎಂದು ಶ್ರೀಕಾಂತ್ ತಿಳಿಸಿದ್ದಾರೆ.
ಮತ್ತೊಮ್ಮೆ ಕ್ರಿಕೆಟ್ ಆಡಲು ತುಡಿಯುತ್ತಿರುವ ನನಗೆ ಬಿಸಿಸಿಐ ಅಡ್ಡಿಪಡಿಸಿದ್ದೇ ಆದಲ್ಲಿ ಅದರ ವಿರುದ್ಧ ಕಾನೂನು ಸಮರ ಸಾರದೆ ಬೇರೆ ಮಾರ್ಗವಿಲ್ಲ ಎಂದು ಕೇರಳ ಮೂಲದ ವೇಗಿ ಎಚ್ಚರಿಸಿದ್ದಾರೆ!
2005ರಲ್ಲಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ ಶ್ರೀಶಾಂತ್, 2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.