ಟೀಂ ಇಂಡಿಯಾಗೆ ಹಿನ್ನಡೆಯಾಗುತ್ತಾ ಭುವನೇಶ್ವರ್ ಕುಮಾರ್ ಇಂಜುರಿ ?

Published : Jul 22, 2018, 04:37 PM IST
ಟೀಂ ಇಂಡಿಯಾಗೆ ಹಿನ್ನಡೆಯಾಗುತ್ತಾ ಭುವನೇಶ್ವರ್ ಕುಮಾರ್ ಇಂಜುರಿ ?

ಸಾರಾಂಶ

ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಗಾಯಗೊಂಡು ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಭುವಿ ಶೀಘ್ರದಲ್ಲಿ ಟೆಸ್ಟ್ ತಂಡ ಸೇರಿಕೊಳ್ಳೋದು ಅನುಮಾನ. ಇದು ಟೀಂ ಇಂಡಿಯಾಗೆ ಹಿನ್ನಡೆಯಾಗುತ್ತಾ? ಈ ಕುರಿತು ಸಚಿನ್ ತೆಂಡೂಲ್ಕರ್ ಹೇಳಿದ್ದೇನು? ಇಲ್ಲಿದೆ.

ಲಂಡನ್(ಜು.22): ಟೀಂ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ ಇಂಜುರಿ ಬಳಿಕ ಭುವನೇಶ್ವರ್ ಕುಮಾರ್ ಕೂಡ ಗಾಯಗೊಂಡಿದ್ದಾರೆ. ಏಕದಿನ ಪಂದ್ಯದಲ್ಲಿ ಭುವನೇಶ್ವರ್ ಇಂಜುರಿಯಿಂದಾಗಿ ಇದೀಗ ಟೆಸ್ಟ್ ಸರಣಿ ಆಡೋದು ಅನುಮಾನವಾಗಿದೆ. ಟೀಂ ಇಂಡಿಯಾದ ಪ್ರಮುಖ ವೇಗಿಯ ಅಲಭ್ಯತೆ ಭಾರತಕ್ಕೆ ಹಿನ್ನಡೆಯಾಗಲಿದೆ ಅನ್ನೋ ಮಾತುಗಳು ಕೇಳಿಬಂದಿದೆ.

ಭುವನೇಶ್ವರ್ ಕುಮಾರ್ ಇಂಜುರಿ ಟೀಂ ಇಂಡಿಯಾಗೆ ನಿಜಕ್ಕೂ ಅತಿ ದೊಡ್ಡ ಹಿನ್ನಡೆ ಎಂದು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ. ಇಂಗ್ಲೆಂಡ್ ಕಂಡೀಷನ್‌ಗಳಲ್ಲಿ ಭುವನೇಶ್ವರ್ ಅತ್ಯುತ್ತಮ ಬೌಲರ್. ಟೆಸ್ಟ್ ಸರಣಿಗಳಲ್ಲಿ ಭುವಿ ಈಗಾಗಲೇ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಭುವನೇಶ್ವರ್ ಅಲಭ್ಯತೆ ಟೀಂ ಇಂಡಿಯಾಗೆ ಕಾಡಲಿದೆ ಎಂದಿದ್ದಾರೆ.

2014ರ ಇಂಗ್ಲೆಂಡ್ ಪ್ರವಾಸದಲ್ಲಿ ಭುವನೇಶ್ವರ್ ಬ್ಯಾಟಿಂಗ್‌ನಲ್ಲೂ ಮಿಂಚಿದ್ದರು. ಹೀಗಾಗಿ ಭುವನೇಶ್ವರ್ ಕುಮಾರ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲೂ ಕಾಣಿಕೆ ನೀಡುತ್ತಿದ್ದರು ಎಂದಿದ್ದಾರೆ. ಬುಮ್ರಾ ಅಲಭ್ಯತೆ ಏಕದಿನ ಪಂದ್ಯದಲ್ಲಿ ಕಾಡಿತ್ತು. ಆದರೆ ಭುವನೇಶ್ವರ್ ಅಲಭ್ಯತೆ ಟೆಸ್ಟ್ ಸರಣಿಯಲ್ಲಿ ಕಾಡಲಿದೆ ಎಂದಿದ್ದಾರೆ ತೆಂಡೂಲ್ಕರ್.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?