
ಮುಂಬೈ(ಜ.23): ಮುಂದಿನ ತಿಂಗಳು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಮಹಿಳಾ ತಂಡವನ್ನು ಸಚಿನ್ ತೆಂಡುಲ್ಕರ್ ತಮ್ಮ ಸ್ಫೂರ್ತಿದಾಯಕ ಮಾತುಗಳಿಂದ ಹುರಿದುಂಬಿಸಿದ್ದಾರೆ.
ಏಕದಿನ ಹಾಗೂ ಟಿ20 ಸರಣಿಗಳ ಕಠಿಣ ಸವಾಲನ್ನು ಎದುರಿಸಲು ಮುಂಬೈ ಕ್ರಿಕೆಟ್ ಸಂಸ್ಥೆಯ ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿ ಅಭ್ಯಾಸ ನಡೆಸುತ್ತಿರುವ ಮಿಥಾಲಿ ರಾಜ್ ನೇತೃತ್ವದ ತಂಡವನ್ನು ಸಚಿನ್ ಭೇಟಿ ಮಾಡಿದರು. ಧನಾತ್ಮಕ ಮನಸ್ಥಿತಿಯೊಂದಿಗೆ ಪ್ರವಾಸಕ್ಕೆ ತೆರಳುವಂತೆ ಸಚಿನ್, ಆಟಗಾರ್ತಿಯರಿಗೆ ಸಲಹೆ ನೀಡಿದರು. ಆಟಗಾರ್ತಿಯರ ಎಲ್ಲಾ ಪ್ರಶ್ನೆಗಳಿಗೆ ಸಚಿನ್ ತಾಳ್ಮೆಯಿಂದ ಉತ್ತರಿಸಿದರು ಎಂದು ಮೂಲಗಳು ತಿಳಿಸಿವೆ.
ಮಿಥಾಲಿ ಪಡೆ ಭೇಟಿ ಮಾಡಿದ್ದು ಸಂತೋಷವನ್ನುಂಟು ಮಾಡಿತು ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಭಾರತ ವನಿತೆಯರ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಫೆಬ್ರವರಿ 5ರಿಂದ ಕಿಂಬರ್ಲಿಯಲ್ಲಿ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿ ಹಾಗೂ ಫೆಬ್ರವರಿ 13ರಿಂದ ಆರಂಭವಾಗಲಿರುವ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.