ಲಾಭದಾಯಕ ಹುದ್ದೆ ಹೊಂದಿಲ್ಲ: ತೆಂಡುಲ್ಕರ್

Published : May 06, 2019, 11:09 AM IST
ಲಾಭದಾಯಕ ಹುದ್ದೆ ಹೊಂದಿಲ್ಲ: ತೆಂಡುಲ್ಕರ್

ಸಾರಾಂಶ

ಹಿತಾಸಕ್ತಿ ಸಂಘರ್ಷಕ್ಕೆ ಸಿಲುಕಿರುವ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ ಪೈಕಿ ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ತುಟಿಬಿಚ್ಚಿದ್ದಾರೆ.

ನವದೆಹಲಿ[ಮೇ.06]: ಬಿಸಿಸಿಐ ಮತ್ತು ಐಪಿಎಲ್‌ನಲ್ಲಿ ಲಾಭದಾಯಕ ಹುದ್ದೆ ಹೊಂದಿದ್ದಾರೆಂದು ಕ್ರಿಕೆಟ್ ವಲಯದಲ್ಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈಗಾಗಲೇ ಬಿಸಿಸಿಐಗೆ ಪತ್ರ ಮುಖೇನ ಉತ್ತರಿಸಿದ್ದ ಸಚಿನ್ ತೆಂಡುಲ್ಕರ್ ಸೇರಿ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿಗೆ ಮತ್ತೊಮ್ಮೆ ನೋಟಿಸ್ ಜಾರಿಯಾಗಿದೆ. 

ಮುಂಬೈ ಇಂಡಿಯನ್ಸ್’ನಿಂದ ಸಚಿನ್‌ಗಿಲ್ಲ ಸಂಭಾವನೆ!

ಆದರೆ, ಬಿಸಿಸಿಐ ಎತ್ತಿರುವ ಈ ವಿಚಾರಕ್ಕೆ ಸಚಿನ್ ಪ್ರತಿಕ್ರಿಯಿಸಿ, ಇದರಲ್ಲಿ ಯಾವುದೇ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆಯ ಪ್ರಶ್ನೆಯೇ ಉದ್ಭವಿಸದು, ಮುಂಬೈ ಇಂಡಿಯನ್ಸ್ ತಂಡದ ಯಾವುದೇ ಲಾಭದಾಯಕ ಹುದ್ದೆಯನ್ನೂ ನಾನು ಹೊಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಬಿಸಿಸಿಐ ಗೊಂದಲಕ್ಕೆ ತೆರೆ ಎಳೆಯಬೇಕು ಎಂದೂ ಹೇಳಿದ್ದಾರೆ. 

ಬಿಸಿಸಿಐ ಆಡಳಿತ ಸಮಿತಿ ವಿರುದ್ಧ ಲಕ್ಷ್ಮಣ್‌ ಗರಂ!

2013ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಗುಡ್’ಬೈ ಹೇಳಿದ್ದ ಸಚಿನ್ ತೆಂಡುಲ್ಕರ್ 2015ರಲ್ಲಿ ಭಾರತೀಯ ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?