ತೆಂಡುಲ್ಕರ್, ಲಕ್ಷ್ಮಣ್’ಗೆ BCCI ಸಮನ್ಸ್..!

Published : May 07, 2019, 11:41 AM IST
ತೆಂಡುಲ್ಕರ್, ಲಕ್ಷ್ಮಣ್’ಗೆ BCCI ಸಮನ್ಸ್..!

ಸಾರಾಂಶ

 ಸ್ವ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ಮಾಡಿದ್ದಾರೆನ್ನುವ ಆಕ್ಷೇಪ ಎದುರಿಸುತ್ತಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್’ಗೆ ಬಿಸಿಸಿಐ ನೋಟಿಸ್ ನೀಡಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...

ನವದೆಹಲಿ[ಮೇ.07]: ಲಾಭದಾಯಕ ಹುದ್ದೆ ಹೊಂದುವುದರೊಂದಿಗೆ ಸ್ವ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ಮಾಡಿದ್ದಾರೆನ್ನುವ ಆಕ್ಷೇಪ ಎದುರಿಸುತ್ತಿರುವ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡುಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ಅವರಿಗೆ ಬಿಸಿಸಿಐ ಓಂಬುಡ್ಸ್‌ಮನ್ ಮತ್ತು ಎಥಿಕ್ಸ್ ಅಧಿಕಾರಿ ನ್ಯಾ.ಡಿ.ಕೆ. ಜೈನ್ ನೋಟಿಸ್ ನೀಡಿದ್ದಾರೆ.

ಮುಂಬೈ ಇಂಡಿಯನ್ಸ್’ನಿಂದ ಸಚಿನ್‌ಗಿಲ್ಲ ಸಂಭಾವನೆ!

ಅಲ್ಲದೆ, ಮೇ 14ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇದೇ ವೇಳೆ ಬಿಸಿಸಿಐನ ಸಿಇಒ ರಾಹುಲ್ ಜೊಹ್ರಿ ಹಾಗೂ ಈ ಬಗ್ಗೆ ದೂರು ನೀಡಿದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಸಂಜೀವ್ ಗುಪ್ತಾ ಅವರಿಗೂ ನೋಟಿಸ್ ನೀಡಲಾಗಿದೆ. 

ಬಿಸಿಸಿಐ ಆಡಳಿತ ಸಮಿತಿ ವಿರುದ್ಧ ಲಕ್ಷ್ಮಣ್‌ ಗರಂ!

ಗುಪ್ತಾ ನೀಡಿರುವ ದೂರಿನಲ್ಲಿ ತೆಂಡುಲ್ಕರ್, ಲಕ್ಷ್ಮಣ್ ಎರಡು ಲಾಭದಾಯಕ ಹುದ್ದೆಗಳನ್ನು ಹೊಂದಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದುಕೊಂಡು ಐಪಿಎಲ್ ತಂಡಗಳಿಗೆ ಸಲಹೆಗಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿರುವ ಸಚಿನ್ ಮತ್ತು ಲಕ್ಷ್ಮಣ್ ಅವರು ಈಗಾಗಲೇ ಓಂಬುಡ್ಸ್’ಮನ್ ನ್ಯಾ.ಜೈನ್ ಅವರಿಗೆ ಪತ್ರ ಮುಖೇನ ಉತ್ತರಿಸಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಭೇಟಿ ವೇಳೆ ಕೋಲ್ಕತಾದಲ್ಲಿ ರಾದ್ಧಾಂತ: ಆಟಗಾರನ ಕಣ್ತುಂಬಿಕೊಳ್ಳಲು ಆಗದ್ದಕ್ಕೆ ಅಭಿಮಾನಿಗಳ ಆಕ್ರೋಶ
ಆರ್‌ಸಿಬಿ ಕಾಲ್ತುಳಿತದ ದುರ್ಘಟನೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.24ಕ್ಕೆ ಮೊದಲ ಕ್ರಿಕೆಟ್‌ ಪಂದ್ಯ? ಕೊಹ್ಲಿ ಭಾಗಿ