
ಕೊಲ್ಹಾಪುರ(ಡಿ.03): ನವೆಂಬರ್ 23ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ಹಾಗೂ ಅವರ ಪತ್ನಿ, ನಟಿ ಸಾಗರಿಕಾ ಘಾಟ್ಗೆ ಮಹಾರಾಷ್ಟ್ರದ ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಆದರೆ ಜಹೀರ್ ಆಗಲಿ ಇಲ್ಲವೇ ಸಾಗರಿಕವಾಗಲಿ ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿಲ್ಲ. ಆದರೆ ಅವರ ಅಭಿಮಾನಿಗಳು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ವಿಶೇಷವೆಂದರೆ ಕೊಲ್ಹಾಪುರ, ಸಾಗರಿಕಾರ ಜನ್ಮಸ್ಥಳ. ಜಹೀರ್ ಬಿಳಿ ಕುರ್ತಾ ಹಾಗೂ ಫೈಜಾಮದಲ್ಲಿ ಮಿಂಚುತ್ತಿದ್ದರೆ, ಸಾಗಾರಿಕಾ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದರು. ತಾರಾ ಜೋಡಿಯನ್ನು ನೋಡಲು ಅಭಿಮಾನಿಗಳ ಬಳಗವೇ ದೇವಸ್ಥಾನದಲ್ಲಿ ನೆರೆದಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.