
ಸಿಂಗಾಪುರ್(ಏ.10): ಲಂಡನ್ ಒಲಿಂಪಿಕ್ ಕಂಚಿನ ಪದಕ ವಿಜೇತೆ ಭಾರತದ ಸೈನಾ ನೆಹ್ವಾಲ್ ಮಂಗಳವಾರದಿಂದ ಆರಂಭಗೊಳ್ಳುತ್ತಿರುವ ಸಿಂಗಾಪುರ ಸೂಪರ್ ಸೀರಿಸ್ ಬ್ಯಾಡ್ಮಿಂಟನ್'ನಿಂದ ಹಿಂದೆಸರಿದಿದ್ದಾರೆ.
ಬಿಡುವಿಲ್ಲದ ವೇಳಾಪಟ್ಟಿಯಿಂದ ಬಳಲಿರುವ ಸೈನಾ, ಮುಂದಿನ ಟೂರ್ನಿಗಳಿಗೆ ಆಟದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ಅಭ್ಯಾಸ ನಡೆಸುವ ಸಲುವಾಗಿ ಈ ನಿರ್ಧಾರ ತಳೆದಿದ್ದಾಗಿ ತಿಳಿಸಿದ್ದಾರಲ್ಲದೆ, ಇದೇ ತಿಂಗಳು ಚೀನಾದಲ್ಲಿ ನಡೆಯಲಿರುವ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್'ಶಿಪ್'ನಲ್ಲಿ ಕಣಕ್ಕಿಳಿಯುವುದಾಗಿ ಖಚಿತಪಡಿಸಿದ್ದಾರೆ.
ಇದೇ ವೇಳೆ ಮಲೇಷ್ಯಾ ಸೂಪರ್ ಸೀರಿಸ್ನ ಮೊದಲ ಸುತ್ತಿನಲ್ಲೇ ನಿರ್ಗಮಿಸಿದ್ದ ಪಿ.ವಿ. ಸಿಂಧು ಭಾರತೀಯ ಸವಾಲನ್ನು ಮುನ್ನಡೆಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.