
ನವದೆಹಲಿ(ಮಾ.17): ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಳೆದ ವಾರ ಛತ್ತೀಸ್'ಗಢದ ಸುಕ್ಮಾದಲ್ಲಿ ನಕ್ಸರ ದಾಳಿಗೆ ಬಲಿಯಾದ 12 ಸಿಆರ್'ಪಿಎಫ್ ಯೋಧರ ಕುಟುಂಬಗಳಿಗೆ ಒಟ್ಟು 6 ಲಕ್ಷ ರೂಪಾಯಿ ಧನಸಹಾಯ ಮಾಡಲು ಮುಂದಾಗಿದ್ದಾರೆ.
ಇಂದು 27ನೇ ವಸಂತಕ್ಕೆ ಕಾಲಿರಿಸಿದ ಲಂಡನ್ ಒಲಿಂಪಿಕ್ ಪದಕ ವಿಜೇತೆ ಸೈನಾ, ಪ್ರತಿ ಯೋಧರ ಕುಟುಂಬಕ್ಕೆ 50 ಸಾವಿರ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.
‘‘ಸೈನಿಕರ ಪ್ರಾಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಮೃತ ಯೋಧರ ಕುಟುಂಬಗಳ ಪರಿಸ್ಥಿತಿ ಊಹಿಸಿಕೊಂಡರೆ ಅತೀವ ನೋವಾಗುತ್ತದೆ’’ ಎಂದು ಸೈನಾ ಹೇಳಿದ್ದಾರೆ.
ನಿನ್ನೆಯಷ್ಟೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ 12 ಮೃತ ಯೋಧರ ಕುಟುಂಬಗಳಿಗೆ ಒಟ್ಟು 1.08 ಕೋಟಿ ರೂಪಾಯಿ ಧನಸಹಾಯ ಮಾಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.