
ಹೈದರಾಬಾದ್(ಫೆ.18): ತೆಲಂಗಾಣ ರಾಜ್ಯದ ರಾಯಭಾರಿಯಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕಿತ್ತೆಸೆಯಿರಿ ಎಂದು ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಆಗ್ರಹಿಸಿದ್ದಾರೆ. ಪುಲ್ವಾಮ ದಾಳಿ ಬಳಿಕ ಶಾಸಕ ರಾಜಾ ಸಿಂಗ್ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾನಿಯಾ ಮಿರ್ಜಾ, ಪಾಕಿಸ್ತಾನ ಕ್ರಿಕೆಟಿಗ ಶೋಯಿಬ್ ಮಲಿಕ್ ಮದುವೆಯಾದ ಬಳಿಕ ಪಾಕಿಸ್ತಾನ ಸೊಸೆಯಾಗಿದ್ದಾರೆ. ಹೀಗಾಗಿ ತೆಲಂಗಾಣ ರಾಯಭಾರಿಯಾಗಿ ಮುಂದುವರಿಸುವುದು ಸೂಕ್ತವಲ್ಲ ಎಂದಿದ್ದಾರೆ.
ಇದನ್ನೂ ಓದಿ: ಟ್ರೋಲಿಗರಿಗೆ ಸಾನಿಯಾ ತಿರುಗೇಟು- ಪಾಕ್ ಪ್ರಚೋದಿತ ದಾಳಿ ಕುರಿತು ಒಂದು ಮಾತಿಲ್ಲ!
ರಾಜಾ ಸಿಂಗ್ ವಿವಾದಾತ್ಮಕ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾನಿಯಾ ಭಾರತದ ಪರ ಆಡುತ್ತಿದ್ದರೂ, ಪಾಕಿಸ್ತಾನಿ ಸೊಸೆಯಾಗಿದ್ದಾರೆ. ಹೀಗಾಗಿ ಪಾಕ್ ಜೊತೆಗಿನ ಯಾವುದೇ ವ್ಯವಹಾರ ಭಾರತಕ್ಕೆ ಬೇಡ. ಹೀಗಾಗಿ ರಾಯಭಾರಿ ಸ್ಥಾನದಿಂದ ಸಾನಿಯಾ ತೆಗೆದುಹಾಕಿ ಎಂದಿದ್ದಾರೆ.
ಇದನ್ನೂ ಓದಿ: ಪುಲ್ವಾಮಾ ದಾಳಿ: ಕಂಗಾಲಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಹತಾಶೆ ಮಾತು!
ಪುಲ್ವಾಮ ಭಯೋತ್ಪಾದಕ ದಾಳಿಯಿಂದ ಭಾರತದ 40 ಹೆಚ್ಚೂ CRPF ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಈ ದಾಳಿ ಬಳಿಕ ಪಾಕಿಸ್ತಾನಕ್ಕೆ ಎಲ್ಲಾ ರೀತಿಯ ಹೊಡೆತ ನೀಡಲು ಭಾರತ ಮುಂದಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.