
ಕರಾಚಿ(ಅ.25): ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನದ ಮಾಜಿ ಆಫ್ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರನ್ನು ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಇಂಗ್ಲೆಂಡ್ ಕ್ರಿಕೆಟ್ ಸಂಸ್ಥೆ ಈ ನಿರ್ಧಾರವನ್ನು ಪ್ರಕಟಿಸಿದೆ. ಉರಿ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಆಟಗಾರರಿಗೆ, ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಲಾಗಿದೆ.
ಇತ್ತೀಚೆಗೆ ನಡೆದ ಕಬಡ್ಡಿ ವಿಶ್ವಕಪ್ನಿಂದಲೂ ಪಾಕಿಸ್ತಾನವನ್ನು ಉಚ್ಛಾಟಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಆಂಗ್ಲರ ತಂಡದೊಂದಿಗೆ ಸಕ್ಲೇನ್ ಮುಷ್ತಾಕ್ ಅವರು ಭಾರತ ಪ್ರವೇಶಿಸುವಾಗ ಯಾವ ವಿವಾದ ಏಳುತ್ತದೋ ಕಾದು ನೋಡಬೇಕಿದೆ.
ಅಂದಹಾಗೆ, ಭಾರತ-ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ನ. 9ರಿಂದ ಆರಂಭಗೊಳ್ಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.