
ನವದೆಹಲಿ(ಜು.06): ರಾಜ್ಯ ಕ್ರಿಕೆಟ್ ಸಂಸ್ಥೆಗಳ ಚುನಾವಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಈ ಮೂಲಕ ಲೋಧ ಶಿಫಾರಸ್ಸು ಅನ್ವಯ ಚುನಾಣೆಗೆ ಸಜ್ಜಾಗಬೇಕಿದ್ದ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸಂವಿಧಾನ ಕುರಿತ ತೀರ್ಪು ಅಂತಿಮಗೊಳ್ಳುವವರೆಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳು ಚುನಾವಣೆ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿದೆ. ಜತೆಗೆ ಬಿಸಿಸಿಐ ಕುರಿತ ತೀರ್ಪನ್ನು 2 ವಾರಗಳವರೆಗೆ ಮುಂದೂಡಿದೆ.
ಮುಖ್ಯ ನ್ಯಾ.ದೀಪಕ್ ಮಿಶ್ರಾ ಹಾಗೂ ನ್ಯಾ. ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ ಅವರನ್ನೊಳಗೊಂಡ ತ್ರಿಸದಸ್ಯಪೀಠ, ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಕುರಿತಂತೆ ಯಾವುದೇ ತೀರ್ಪು ನೀಡಬಾರದು ಎಂದು ಆಯಾ ರಾಜ್ಯ ಹೈಕೋರ್ಟ್ಗಳಿಗೆ ಸೂಚಿಸಿದೆ. ನ್ಯಾ.ಲೋಧಾ ಶಿಫಾರಸ್ಸುಗಳಾದ ಒಂದು ರಾಜ್ಯ, ಒಂದು ಮತ ಮತ್ತು ಕೂಲಿಂಗ್ ಆಫ್ ಅವಧಿ ನಿಯಮಗಳಲ್ಲಿ ಬದಲಾವಣೆ ತರುವುದಕ್ಕೆ ಯೋಚಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.