
ಮುಂಬೈ(ಅ.23): ಅಹಮದಬಾದ್ನಲ್ಲಿ ನಡೆದ ಕಬಡ್ಡಿ ವಿಶ್ವಕಪ್ ಫೈನಲ್ನಲ್ಲಿ ಇರಾನ್ ವಿರುದ್ಧ ಭಾರತ ತಂಡ 38-29 ಅಂಕಗಳಿಂದ ಭರ್ಜರಿ ಜಯ ದಾಖಲಿಸಿತು.
ಇದರಿಂದ ಸಖತ್ ಖುಷಿಗೊಂಡಿರುವ ಅಭಿಮಾನಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಭಾರತ ತಂಡಕ್ಕೆ ಶುಭಾಷಯಗಳ ಮಹಾಪೂರವನ್ನೇ ಹರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಟ್ವೀಟರ್ ನಲ್ಲಿ ಟೀಮ್ ಇಂಡಿಯಾಕ್ಕೆ ಶುಭಾಷಯ ಕೋರಿರುವ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಇದರ ಜೊತೆಯಲ್ಲಿ ಆಂಗ್ಲರ ಕಾಲು ಎಳೆದಿದ್ದಾರೆ.
ಭಾರತಕಬಡ್ಡಿ ಯನ್ನು ಹುಟ್ಟಿ ಹಾಕಿತು, ಅಲ್ಲದೇ 8 ಬಾರಿ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಆದರೆ ಕ್ರಿಕೆಟ್ ಹುಟ್ಟುಹಾಕಿದವರು ಒಂದೂ ಕಪ್ ಗೆಲ್ಲಲಾಗದೆ ಇನ್ನು ಬರವಣಿಗೆಯಲ್ಲಿನ ತಪ್ಪುಗಳನ್ನೇ ಹುಡುಕುತ್ತಿದ್ದಾರೆ ಎಂದು ಕುಟುಕಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.