ಆಯ್ಕೆ ಸಮಿತಿಯನ್ನು ನಿರಾಸೆಗೊಳಿಸಿದ ರಹಾನೆ..!

Published : Oct 10, 2017, 03:58 PM ISTUpdated : Apr 11, 2018, 12:49 PM IST
ಆಯ್ಕೆ ಸಮಿತಿಯನ್ನು ನಿರಾಸೆಗೊಳಿಸಿದ ರಹಾನೆ..!

ಸಾರಾಂಶ

ರಹಾನೆ ಅವರಂತಹ ಪ್ರಮುಖ ಆಟಗಾರ ಮುಂಬೈ ತಂಡದಿಂದ ಹೊರಗುಳಿದಿರುವುದು ಸಹಜವಾಗಿಯೇ ಮುಂಬೈ ಆಯ್ಕೆ ಸಮಿತಿಗೆ ನಿರಾಸೆಯನ್ನುಂಟು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ(ಅ.10): ಟೀಂ ಇಂಡಿಯಾ ಆರಂಭಿಕ ಆಟಗಾರರ ಅಜಿಂಕ್ಯ ರಹಾನೆ, ರಣಜಿ ಟ್ರೋಫಿಯ ಮಧ್ಯ ಪ್ರದೇಶ ವಿರುದ್ಧದ ಪಂದ್ಯಕ್ಕೆ ತಾವು ಲಭ್ಯವಿಲ್ಲ ಎನ್ನುವ ಮೂಲಕ ಮುಂಬೈ ಆಯ್ಕೆ ಸಮಿತಿಗೆ ನಿರಾಸೆ ಉಂಟುಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿರುವ ರಹಾನೆ, ಅಕ್ಟೋಬರ್ 14ರಿಂದ ಆರಂಭವಾಗಲಿರುವ ಮಧ್ಯ ಪ್ರದೇಶ ವಿರುದ್ಧದ ಪಂದ್ಯಕ್ಕೆ ಮುಂಬೈ ರಣಜಿ ತಂಡದ ಪರ ಕಣಕ್ಕಿಳಿಯಬಹುದು ಎಂದು ನಿರೀಕ್ಷಿಸಲಾಗಿತ್ತು.  ಆದರೆ ತಾವು ಈ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆಂದು ಮುಂಬೈ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ತಿಳಿಸಿದ್ದಾರೆ.

ರಹಾನೆ ಅವರಂತಹ ಪ್ರಮುಖ ಆಟಗಾರ ಮುಂಬೈ ತಂಡದಿಂದ ಹೊರಗುಳಿದಿರುವುದು ಸಹಜವಾಗಿಯೇ ಮುಂಬೈ ಆಯ್ಕೆ ಸಮಿತಿಗೆ ನಿರಾಸೆಯನ್ನುಂಟು ಮಾಡಿದೆ ಎಂದು ಮೂಲಗಳು ತಿಳಿಸಿವೆ.

41 ಬಾರಿ ರಣಜಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ತಂಡವನ್ನು ಆದಿತ್ಯ ತಾರೆ ಮುನ್ನಡೆಸಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?