
ಕೋಲ್ಕತಾ(ಡಿ.15): ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಭಾರತದ ಟೆಸ್ಟ್ ತಜ್ಞರಿಗೆ ರಣಜಿ ಟ್ರೋಫಿ ಸೆಮಿಫೈನಲ್'ನಲ್ಲಿ ಆಡಲು ಬಿಸಿಸಿಐ ಅನುಮತಿ ನೀಡಿದೆ. ವೇಗಿ ಮೊಹಮದ್ ಶಮಿ ಹಾಗೂ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಬಂಗಾಳ ತಂಡದಲ್ಲಿ ಸ್ಥಾನ
ಪಡೆದಿದ್ದಾರೆ. ವಿದರ್ಭ ವಿರುದ್ಧ ಸೆಮೀಸ್ ಆಡಲಿರುವ ಕರ್ನಾಟಕ ತಂಡದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಕೆ. ಎಲ್.ರಾಹುಲ್ ಸ್ಥಾನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇಶಾಂತ್ ಶರ್ಮಾ ಗಾಯದ ಕಾರಣ ದೆಹಲಿ ಪರ ಆಡುತ್ತಿಲ್ಲ. ಡಿ.17ರಿಂದ ಸೆಮೀಸ್ ಆರಂಭಗೊಳ್ಳಲಿದ್ದು, ಈ ಪಂದ್ಯದ ಬಳಿಕ ಭಾರತ ತಂಡ ಆಫ್ರಿಕಾಕ್ಕೆ ವಿಮಾನ ಹತ್ತಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.