
ಮುಂಬೈ(ಸೆ.29): ಬಿಸಿಸಿಐನಲ್ಲೀಗ ಸ್ವಹಿತಾಸಕ್ತಿ ಸಂಘರ್ಷ(Conflict of Interest) ಜೋರಾಗಿದೆ. ಇತ್ತೀಚೆಗಷ್ಟೇ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ಗೂ ಸ್ವಹಿತಾಸಕ್ತಿ ನೊಟೀಸ್ ನೀಡಿದ ಬೆನ್ನಲ್ಲೇ, ಇದೀಗ ಕಪಿಲ್ ದೇವ್ ನೇತೃತ್ವದ ಸಲಹಾ ಸಮಿತಿಗೂ ಬಿಸಿಸಿಐ ಸ್ವಹಿತಾಸಕ್ತಿ ಸಂಘರ್ಷ ನೊಟೀಸ್ ನೀಡಿದೆ. ನೊಟೀಸ್ಗೆ ಉತ್ತರಿಸೋ ಮೊದಲೇ ಸಲಹಾ ಸಮಿತಿ ಸದಸ್ಯೆ ಶಾಂತಾ ರಂಗಸ್ವಾಮಿ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಇದನ್ನೂ ಓದಿ: ಶಾಸ್ತ್ರಿ ಎದುರಾಗಿದೆ ಸಂಕಷ್ಟ; ಹೊಸದಾಗಿ ನಡೆಯುತ್ತಾ ಕೋಚ್ ಆಯ್ಕೆ?
ಸ್ವಹಿತಾಸಕ್ತಿ ಸಂಘರ್ಷದ ಕುರಿತು ಹಲವರು ಮಾತನಾಡಿದ್ದಾರೆ. ಟೀಕೆ ವ್ಯಕ್ತಪಡಿಸಿದ್ದಾರೆ. ಆದರೆ ಪ್ರತಿಯೊಬ್ಬರ ಮಾತನ್ನು ಕೇಳಿ ಬಿಸಿಸಿಐ ಎಥಿಕ್ಸ್ ಅಧಿಕಾರಿ ಡಿಕೆ ಜೈನ್ ನೊಟೀಸ್ ಕಳುಹಿಸುತ್ತಿದ್ದರೆ ಆಡಳಿತ ನಡೆಸಲು ಸಾಧ್ಯವಿಲ್ಲ. ಇದು ನನಗೆ ನೋವಾಗಿದೆ. ಹೀಗಾಗಿ ಕ್ರಿಕೆಟ್ ಸಲಹಾ ಸಮಿತಿ ಹಾಗೂ ಕ್ರಿಕೆಟರ್ಸ್ ಆಸೋಸಿಯೇಶನ್ಗೂ ರಾಜೀನಾಮೆ ನೀಡಿದ್ದೇನೆ ಎಂದು ಶಾಂತ ರಂಗಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: ಎಲ್ಲಾ ವೃತ್ತಿಗೂ ಹಿತಾಸಕ್ತಿ ಸಂಘರ್ಷವಿದೆ: ಕುಂಬ್ಳೆ
ಬಿಸಿಸಿಐ ನೊಟೀಸ್ ಬಂದ ಮೇಲೆ ಹುದ್ದೆಯಲ್ಲಿ ಮುಂದುವರಿಯುವುದು ಸೂಕ್ತ ಎಂದೆನಿಸುತ್ತಿಲ್ಲ. ಜವಾಬ್ದಾರಿ ನೀಡುವಾಗ ಬಿಸಿಸಿಐ ಸ್ವಹಿತಾಸಕ್ತಿ ಕುರಿತು ಗಮನ ವಹಿಸಲಿ. ಇಷ್ಟೇ ಅಲ್ಲ ಸ್ವಹಿತಾಸಕ್ತಿ ಕುರಿತು ಬಿಸಿಸಿಐ ಸ್ಪಷ್ಟ ಮಾಹಿತಿ ನೀಡಲಿ ಎಂದು ರಂಗಸ್ವಾಮಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.