
ಮೊಹಾಲಿ(ಡಿ.13): ನಾಯಕ ರೋಹಿತ್ ಶರ್ಮಾ ಬಾರಿಸಿದ ಆಕರ್ಷಕ ದ್ವಿಶತಕ ಹಾಗೂ ಬೌಲರ್'ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 141 ರನ್'ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಸರಣಿಯಲ್ಲಿ ಟೀಂ ಇಂಡಿಯಾ 1-1 ಸಮಬಲ ಸಾಧಿಸಿದೆ. ಇದೀಗ ಡಿ.17ರಂದು ವಿಶಾಖಪಟ್ನಂನಲ್ಲಿ ನಡೆಯಲಿರುವ ಮೂರನೇ ಹಾಗೂ ನಿರ್ಣಾಯಕ ಪಂದ್ಯವು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಟೀಂ ಇಂಡಿಯಾ ನೀಡಿದ್ದ 393 ರನ್'ಗಳ ಬೃಹತ್ ಮೊತ್ತಕ್ಕೆ ಉತ್ತರವಾಗಿ ಲಂಕಾ ಪಡೆ ನಿಗದಿತ 50 ಓವರ್'ಗಳಲ್ಲಿ 8 ವಿಕೆಟ್ ಕಳೆದುಕೊಂಡು 251 ರನ್ ಗಳಿಸಲಷ್ಟೇ ಶಕ್ತವಾಯಿತು. ಲಂಕಾ ಪರ ಮಾಜಿ ನಾಯಕ ಆ್ಯಂಜಲೋ ಮ್ಯಾಥ್ಯೂಸ್ ಅಜೇಯ ಶತಕ(111) ಬಾರಿಸಿದ್ದು ಹೊರತುಪಡಿಸಿದರೆ, ಉಳಿದ ಬ್ಯಾಟ್ಸ್'ಮನ್'ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಭಾರತ ಪರ ಯುಜುವೇಂದ್ರ ಚಾಹಲ್ 3 ವಿಕೆಟ್ ಪಡೆದರೆ, ಬುಮ್ರಾ 2 ಹಾಗೂ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ 1 ವಿಕೆಟ್ ಪಡೆದು ಮಿಂಚಿದರು.
ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ನಾಯಕ ರೋಹಿತ್ ಶರ್ಮಾರ ಸಿಡಿಲಬ್ಬರದ ದ್ವಿಶತಕ(208*) ಹಾಗೂ ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ಅವರ ಮಿಂಚಿನ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 392 ರನ್ ಕಲೆಹಾಕಿತ್ತು.
ಸಂಕ್ಷಿಪ್ತ ಸ್ಕೋರ್:
ಭಾರತ: 392/4
ರೋಹಿತ್ ಶರ್ಮಾ: 208*
ಶ್ರೇಯಸ್ ಅಯ್ಯರ್: 88
ಪೆರೇರಾ: 80/3
ಶ್ರೀಲಂಕಾ: 251/8
ಆ್ಯಂಜಲೋ ಮ್ಯಾಥ್ಯೂಸ್: 111*
ಗುಣರತ್ನೆ: 34
ಚಾಹಲ್: 60/3
ಪಂದ್ಯಪುರುಷೋತ್ತಮ: ರೋಹಿತ್ ಶರ್ಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.