
ನವದೆಹಲಿ(ಜು.19): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಮತ್ತೊಂದು ವರಸೆ ಶುರು ಮಾಡಿದ್ದಾರೆ. ತಮಗೆ ಬೇಕದ ಬೌಲಿಂಗ್'ಗೆ ಭರತ್ ಅರುಣ್ ಹಾಗೂ ಸಹಾಯಕ ಕೋಚ್ ಸಂಜಯ್ ಬಂಗಾರ್ ಅವರನ್ನು ನೇಮಿಸಿದ ನಂತರ ಈಗ ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರನ್ನು ಬ್ಯಾಟಿಂಗ್ ಸಲಹೆಗಾರರನ್ನಾಗಿ ನೇಮಿಸಬೇಕೆಂದು ಬಿಸಿಸಿಐಗೆ ಪ್ರಸ್ತಾವವಿಟ್ಟಿದ್ದರು.
ಸಚಿನ್ ಪ್ರಸ್ತುತ ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಹಾಗೂ ಮುಂಬೈ ಇಂಡಿಯನ್ಸ್ ಜೊತೆಗೂ ಗುರುತಿಸಿಕೊಂಡಿದ್ದಾರೆ. ಸ್ವಹಿತಾಸಕ್ತಿ ಆರೋಪ ಎದುರಾಗಲಿದೆ ಎನ್ನುವ ಕಾರಣ ಸಚಿನ್'ರನ್ನು ಬ್ಯಾಟಿಂಗ್ ಸಲಹೆಗಾರನಾಗಿ ನೇಮಿಸುವುದು ಕಷ್ಟ ಎಂದು ಬಿಸಿಸಿಐ ಶಾಸ್ತ್ರಿಗೆ ತಿಳಿಸಿದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.