
ನವದೆಹಲಿ(ಡಿ.29): ದಕ್ಷಿಣ ಆಫ್ರಿಕಾಗೆ ತೆರಳುತ್ತಿದ್ದ ಭಾರತ ಕ್ರಿಕೆಟಿಗ ಶಿಖರ್ ಧವನ್ ಜತೆಗಿದ್ದ ಪತ್ನಿ ಆಯೆಷಾ ಹಾಗೂ ಪುತ್ರನಿಗೆ ದುಬೈ ವಿಮಾನ ನಿಲ್ದಾಣದಲ್ಲಿ ಆಫ್ರಿಕಾದ ವಿಮಾನವೇರಲು ಅವಕಾಶ ನಿರಾಕರಿಸಿದ ಘಟನೆ ನಡೆದಿದೆ. ಸ್ವತಃ ಈ ವಿಷಯವನ್ನು ಧವನ್ ಟ್ವೀಟ್ ಮಾಡಿದ್ದು, ಎಮಿರೇಟ್ಸ್ ವಿಮಾನಯಾನ ಸಂಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದ.ಆಫ್ರಿಕಾದ ವಿರುದ್ಧದ ಸರಣಿಯಲ್ಲಿ ಪಾಲ್ಗೊಳ್ಳಲು ಧವನ್ ಕುಟುಂಬ ಸಮೇತ ದುಬೈ ಮಾರ್ಗವಾಗಿ ದ.ಆಫ್ರಿಕಾಗೆ ಹೊರಟ್ಟಿದ್ದರು. ದುಬೈ ವಿಮಾನನಿಲ್ದಾಣದಲ್ಲಿ ಅವರ ಪುತ್ರನ ಜನನ ನೋಂದಣಿ ಪತ್ರ ಕೇಳಿದ್ದಾರೆ. ಇದು ಇಲ್ಲದ ಕಾರಣ ವಿಮಾನವೇರಲು ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.
ಭಾರತ ಮೂರು ಟೆಸ್ಟ್, 6 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.