ಗಾಯದ ಸಮಸ್ಯೆ: ಶ್ರೀಲಂಕಾ ಸರಣಿಯಿಂದ ಭಾರತದ ಪ್ರಮುಖ ಬ್ಯಾಟ್ಸ್'ಮೆನ್ ಔಟ್

Published : Jul 17, 2017, 05:51 PM ISTUpdated : Apr 11, 2018, 12:58 PM IST
ಗಾಯದ ಸಮಸ್ಯೆ: ಶ್ರೀಲಂಕಾ ಸರಣಿಯಿಂದ ಭಾರತದ ಪ್ರಮುಖ ಬ್ಯಾಟ್ಸ್'ಮೆನ್ ಔಟ್

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧದ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವು 2-1 ರಿಂದ ಸರಣಿ ಗೆದ್ದುಕೊಂಡಿತ್ತು. ಜುಲೈ 26 ರಿಂದ ಟೀ ಇಂಡಿಯಾ ಶ್ರೀಲಂಕಾ ವಿರುದ್ಧ 3 ಟೆಸ್ಟ್, 5 ಏಕದಿನ ಹಾಗೂ 1 ಟಿ20 ಪಂದ್ಯಗಳನ್ನು ಆಡಲಿದೆ.

ಮುಂಬೈ(ಜು.17): ಗಾಯದ ಸಮಸ್ಯೆಯಿಂದಾಗಿ ಜುಲೈ 26 ರಿಂದ ನಡೆಯುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ  ಟೀಂ ಇಂಡಿಯಾದ ಪ್ರಮುಖ ಟೆಸ್ಟ್ ಆಟಗಾರ ಮುರುಳಿ ವಿಜಯ್ ಹೊರಗುಳಿದಿದ್ದು, ಅವರ ಬದಲಿಗೆ ಏಕದಿನ ಪಂದ್ಯದ ಆರಂಭಿಕ ಆಟಗಾರ ಶಿಖರ್ ಧವನ್ ಸೇರ್ಪಡೆಗೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮುರುಳಿ ವಿಜಯ್ ಅವರಿಗೆ ಬಲ ಮೊಣಕೈ'ಗೆ ಗಂಭೀರ ಗಾಯವಾದ ಕಾರಣ ಶ್ರೀಲಂಕಾ ವಿರುದ್ಧದ ಪಂದ್ಯಗಳಿಗೆ ಬಿಡುವು ನೀಡಲಾಗಿದ್ದು, ವೈದ್ಯರ ಸಲಹೆ ಮೇರೆಗೆ ಕೆಲ ದಿನಗಳ ಕಾಲ ಮುರುಳಿ ವಿಜಯ್ ಅವರು ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವು 2-1 ರಿಂದ ಸರಣಿ ಗೆದ್ದುಕೊಂಡಿತ್ತು. ಜುಲೈ 26 ರಿಂದ ಟೀ ಇಂಡಿಯಾ ಶ್ರೀಲಂಕಾ ವಿರುದ್ಧ 3 ಟೆಸ್ಟ್, 5 ಏಕದಿನ ಹಾಗೂ 1 ಟಿ20 ಪಂದ್ಯಗಳನ್ನು ಆಡಲಿದೆ. ಶಿಖರ್ ಧವನ್ ಅವರಿಗೆ 2016 ಅಕ್ಟೋಬರ್'ನಲ್ಲಿ ಕೋಲ್ಕತ್ತಾದಲ್ಲಿ ನ್ಯೂಜಿಲ್ಯಾಂಡ್' ವಿರುದ್ಧ ನಡೆದ ಟೆಸ್ಟ್ ಪಂದ್ಯವೇ ಅಂತಿಮ ಪಂದ್ಯವಾಗಿತ್ತು. ತದ ನಂತರ ಗಾಯದ ಸಮಸ್ಯೆಗಳಿಂದ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಸರಣಿಗಳಿಂದ ತಂಡದಿಂದ ಹೊರಗುಳಿದಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು
ಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ