
ಲುಧಿಯಾನ(ಸೆ.17): ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನ ಮಾನ(ಆರ್ಟಿಕಲ್ 370) ರದ್ದು ಮಾಡಿದ ಬಳಿಕ ಪಾಕಿಸ್ತಾನ ಹತಾಶೆಗೊಂಡಿದೆ. ಹಲವು ಪಾಕಿಸ್ತಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಪಾಕಿಸ್ತಾನಿ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸುಫ್ ಕೂಡ ಸರಣಿ ಟ್ವೀಟ್ ಮೂಲಕ ಗಮನಸೆಳೆಯುವ ಪ್ರಯತ್ನ ಮಾಡಿದ್ದಾಳೆ. ಇದೀಗ ಯುಸೂಫ್ಗೆ ಭಾರತೀಯ ಶೂಟರ್ ಹೀನಾ ಸಿಧು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ಕಾಶ್ಮೀರಿ ಮಕ್ಕಳು ಶಾಲೆಗೆ ಹೋಗಲಿ ಎಂದ ಮಲಾಲ: ಶೋಭಾ ಸವಾಲಿಗೆ ವಿಲವಿಲ!
ಕಾಶ್ಮೀರ ಪರಿಸ್ಥಿತಿ ಕುರಿತು ಮಲಾಲ ಟ್ವೀಟ್ ಮಾಡಿ ಭಾರತವನ್ನು ಕೆಣಕೋ ಪ್ರಯತ್ನ ಮಾಡಿದ್ದರು. ನನಗೆ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಆಗಸ್ಟ್ 12ರಂದು ನಾನು ಪರೀಕ್ಷೆಯನ್ನು ಮಿಸ್ ಮಾಡಿಕೊಂಡೆ. ನನ್ನ ಭವಿಷ್ಯಕ್ಕೆ ಯಾವುದೇ ಸುರಕ್ಷತೆ ಇಲ್ಲ ಎಂದು ನನಗನಿಸುತ್ತಿದೆ. ನಾನು ಬರಹಗಾರ್ತಿಯಾಗಬೇಕು, ಸ್ವತಂತ್ರವಾಗಿ ಬದುಕು ರೂಪಿಸಬೇಕು. ಯಶಸ್ವಿ ಕಾಶ್ಮೀರಿ ಮಹಿಳೆ ಎಂದು ಗುರುತಿಸಿಕೊಳ್ಳಬೇಕು. ಆದರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ ಎಂದು ಮಲಾಲ ಕಾಶ್ಮೀರ ಹುಡುಗಿಯ ಮನದಾಳ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಏಷ್ಯನ್ ಗೇಮ್ಸ್: ಹೀನಾ ಸಿಧುಗೆ ಒಲಿದ ಕಂಚು
ಈ ಟ್ವೀಟ್ಗೆ ಹೀನಾ ಸಿಧು ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಉದ್ದೇಶ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ನೀಡಬೇಕು, ಕಾರಣ ನೀವು ಪಡೆದ ರೀತಿಯ ಉತ್ತಮ ಶಿಕ್ಷಣಕ್ಕಾಗಿ ಅನ್ನೋದು ನಿಮ್ಮ ವಾದ. ನೆನಪಿರಲಿ ನೀವು ಕೂದಲೆಳೆಯುವ ಅಂತರದಲ್ಲಿ ಸಾವಿನಿಂದ ಪಾರಾಗಿ, ಪಾಕಿಸ್ತಾನ ಬಿಟ್ಟು ಓಡಿ ಹೋಗಿದ್ದೀರಿ. ಬಳಿಕ ಪಾಕಿಸ್ತಾನಕ್ಕೆ ಮರಳಲೇ ಇಲ್ಲ. ಪಾಕ್ ಶಾಂತಿಯುತವಾಗಿದೆ ಎಂದು ನಮಗೆ ತೋರಿಸಲು ನೀವು ಯಾಕೆ ಪಾಕಿಸ್ತಾನಕ್ಕೆ ಮರಳಬಾರದು ಎಂದು ಹೀನಾ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.