
ಬೆಂಗಳೂರು[ಆ.15]: ನಿರಂತರವಾಗಿ ರನ್ ಗಳಿಸುತ್ತಿದ್ದರೂ ಹಿರಿಯರ ತಂಡದಲ್ಲಿ ಸ್ಥಾನ ನೀಡದ್ದಕ್ಕೆ ಭಾರತ ‘ಎ’ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸತತವಾಗಿ ಉತ್ತಮ ಪ್ರದರ್ಶನ ತೋರುತ್ತಿದ್ದರೂ ಅವಕಾಶ ನೀಡದಿದ್ದಾಗ, ತಾಳ್ಮೆಯಿಂದರಲು ಕಷ್ಟವಾಗುತ್ತದೆ. ಆಯ್ಕೆ ಸಮಿತಿ ನಿರ್ಲಕ್ಷ್ಯ ತೋರುತ್ತಿರುವುದು ನನ್ನ ಆಟದ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಅಯ್ಯರ್ ಬೇಸರದಿಂದ ಹೇಳಿಕೊಂಡಿದ್ದಾರೆ.
ಕಳೆದ ವರ್ಷ ಭಾರತ ’ಎ’ ಪರ ನ್ಯೂಜಿಲೆಂಡ್ ’ಎ’ ತಂಡದ ವಿರುದ್ಧ 317 ರನ್ ಸಿಡಿಸಿ ಗಮನ ಸೆಳೆದಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್’ನಲ್ಲೂ ಮಿಂಚಿನ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.