
ಸಿಂಗಾಪುರ್(ಏ.16): ಭಾರತದ ಸ್ಟಾರ್ ಶಟ್ಲರ್'ಗಳಾದ ಕೆ.ಶ್ರೀಕಾಂತ್ ಮತ್ತು ಬಿ. ಸಾಯಿ ಪ್ರಣೀತ್ ನಡುವಿನ ಸಿಂಗಾಪುರ್ ಫೈನಲ್ ಪಂದ್ಯದಲ್ಲಿ ಯುವ ಪ್ರತಿಭೆ ಬಿ. ಸಾಯಿ ಪ್ರಣೀತ್ ಪ್ರಶಸ್ತಿ ಜಯಿಸುವಲ್ಲಿ ಸಫಲರಾಗಿದ್ದಾರೆ.
ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರರೆನಿಸಿಕೊಂಡಿದ್ದಕೆ. ಶ್ರೀಕಾಂತ್ ಮೊದಲ ಗೇಮ್ಸ್'ನ್ನು 21-17 ಅಂಕಗಳ ಅಂತರದಲ್ಲಿ ತಮ್ಮದಾಗಿಸಿಕೊಂಡರು. ಆದರೆ ಎರಡನೇ ಹಾಗೂ ಮೂರನೇ ಗೇಮ್ಸ್'ನಲ್ಲಿ (21-17, 21-12) ಬಲಿಷ್ಟ ತಿರುಗೇಟು ನೀಡಿದ ಸಾಯಿ ಪ್ರಣೀತ್ ಚೊಚ್ಚಲ ಸೂಪರ್ ಸೀರಿಸ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾದರು.
ಇದುವರೆಗೂ ಭಾರತದ ಈ ಇಬ್ಬರು ಆಟಗಾರರು ಐದು ಬಾರಿ ಮುಖಾಮುಖಿಯಾಗಿದ್ದು ಕಳೆದ ನಾಲ್ಕು ಪಂದ್ಯಗಳಲ್ಲಿ ಶ್ರೀಕಾಂತ್ ಜಯಿಸಿದ್ದರೆ, ಇದೇ ಮೊದಲ ಬಾರಿಗೆ ಸಾಯಿ ಪ್ರಣಿತ್ ಗೆಲುವಿನ ನಗೆ ಬೀರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.