
ಕೊಲೊಂಬೊ(ಏ.18): ವಿಶ್ವಕಪ್ ಟೂರ್ನಿಗೆ ಎಲ್ಲಾ ರಾಷ್ಟ್ರಗಳು ತಂಡ ಪ್ರಕಟಿಸುತ್ತಿದೆ. ಭಾರತ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಸೇರಿದಂತೆ ಬಹುತೇಕ ರಾಷ್ಟ್ರಗಳು ಈಗಾಗಲೇ ತಂಡ ಪ್ರಕಟಿಸಿದೆ. ಇದೀಗ ಶ್ರೀಲಂಕಾ ವಿಶ್ವಕಪ್ ಟೂರ್ನಿಗೆ ಬಲಿಷ್ಠ 15 ಸದಸ್ಯರ ತಂಡ ಪ್ರಕಟಿಸಿದೆ. ವಿಶೇಷ ಅಂದರೆ ಮೂವರು ಮಾಜಿ ನಾಯಕರಿಗೆ ಸ್ಥಾನ ನೀಡಲಾಗಿದೆ.
ಇದನ್ನೂ ಓದಿ: ವಿಶ್ವಕಪ್ 2019: ರಾಯುಡು, ಪಂತ್’ಗೆ ಗುಡ್’ನ್ಯೂಸ್..!
ಲಂಕಾ ವಿಶ್ವಕಪ್ ತಂಡ ಪ್ರಕಟಕ್ಕೂ ಮೊದಲೇ ನಾಯಕನ ಹೆಸರು ಬಹಿರಂಗ ಪಡಿಸಿತ್ತು. ದಿಮುತ್ ಕರುಣಾರತ್ನೆಗೆ ನಾಯಕತ್ವ ನೀಡಲಾಗಿದೆ. ತಂಡದಲ್ಲಿ ಮಾಜಿ ನಾಯಕರಾದ ವೇಗಿ ಲಸಿತ್ ಮಾಲಿಂಗ, ಎಂಜಲೋ ಮ್ಯಾಥ್ಯೂಸ್ ಹಾಗೂ ತಿಸರಾ ಪರೇರಾಗೆ ಸ್ಥಾನ ನೀಡಲಾಗಿದೆ. ಈ ಮೂಲಕ ಅನುಭವಿ ಹಾಗೂ ಯುಕರ ತಂಡವನ್ನು ಪ್ರಕಟಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.