
ಕೋಲ್ಕತಾ(ಫೆ.08): ಭಾರತ ಮತ್ತು ಇಂಗ್ಲೆಂಡ್ ನಡುವಣ ನಡೆದ ಏಕದಿನ ಕ್ರಿಕೆಟ್ ಪಂದ್ಯಕ್ಕಾಗಿ, ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷ ಸೌರವ್ ಗಂಗೂಲಿ 200 ರಿಂದ 300 ಕಾಂಪ್ಲಿಮೆಂಟರಿ ಪಾಸ್'ಗಳನ್ನು ಪಡೆದಿದ್ದರು. ಅಲ್ಲದೇ ಈ ರೀತಿಯ ಕ್ರಮದಿಂದಾಗಿ ಸಾಕಷ್ಟು ಮಾಜಿ ಆಟಗಾರರಿಗೆ ಅನ್ಯಾಯವಾಗಿದೆ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ ಮಾಜಿ ಖಜಾಂಚಿ ಬಿಸ್ವಾರಪ್ ಡೇ ಆರೋಪಿಸಿದ್ದಾರೆ.
ಬಿಸ್ವಾರಪ್ ಅವರ ಆರೋಪ ಆಧಾರರಹಿತವಾಗಿದ್ದು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಭಾರತದ ಮಾಜಿ ನಾಯಕ ಗಂಗೂಲಿ ಹೇಳಿದ್ದಾರೆ.
ಮುಂದಿನ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿನ ಪಂದ್ಯಗಳಲ್ಲಾದರೂ ಕಾಂಪ್ಲಿಮೆಂಟರಿ ಪಾಸ್ಗಳ ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಬಿಸ್ಪಾರಪ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.